ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಗೆ ರಾಜ್ಯದ ಅತ್ಯುತ್ತಮ ಸಹಕಾರಿ ಮೀನು ಮಾರಾಟ ಮಹಾಮಂಡಲ ಪ್ರಶಸ್ತಿ

ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರಿಕೆ ಸಹಕಾರಿ ಕ್ಷೇತ್ರದಲ್ಲಿನ ಶ್ರೇಷ್ಠ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರಕಾರದ ಮೀನುಗಾರಿಕೆ ಇಲಾಖೆಯಿಂದ ನೀಡಲ್ಪಡುವ ರಾಜ್ಯದ ಅತ್ಯುತ್ತಮ ಮೀನುಗಾರರ ಸಹಕಾರಿ ಮಹಾಮಂಡಲ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ರವರು ಗೌರವಾನ್ವಿತ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರವರಿಂದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ  ಕೆ ರಘುಪತಿ ಭಟ್, ಸೊರಬ ವಿಧಾನಸಭಾ ಕ್ಷೇತ್ರದ ಶಾಸಕಕುಮಾರ್ ಬಂಗಾರಪ್ಪ ಹಾಗೂ ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು​​ ಉಪಸ್ಥಿತರಿದ್ದರು.​​

 
 
 
 
 
 
 
 
 
 
 

Leave a Reply