ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕ ಯಶ್ ಪಾಲ್ ಸುವರ್ಣ ರವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರಿಂದ ಸನ್ಮಾನ

ಇಂದು ದಾವಣಗೆರೆಯಲ್ಲಿ ಭಾರತೀಯ ಜನತಾ ಪಾರ್ಟಿ, ಕರ್ನಾಟಕ ವತಿಯಿಂದ ಆಯೋಜಿಸಿದ್ದ ರಾಜ್ಯದ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರ ಸಭೆ ಯಲ್ಲಿ  ಕರ್ನಾಟಕ ಸರಕಾರದ ಮೀನುಗಾರಿಕೆ ಇಲಾಖೆಯ ವತಿಯಿಂದ
ಮೀನುಗಾರರ ಸಹಕಾರಿ ಕ್ಷೇತ್ರದ ವಿಶಿಷ್ಟ ಸೇವೆಗಾಗಿ ಅತ್ಯುತ್ತಮ ಮೀನು ಮಾರಾಟ ಮಹಾಮಂಡಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರೂ,ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ಯಶ್ ಪಾಲ್ ಸುವರ್ಣರವರನ್ನು ರಾಜ್ಯ ಬಿಜೆಪಿ ವತಿಯಿಂದ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲು ರವರು ಸನ್ಮಾನಿಸಿ ಅಭಿನಂದಿಸಿದರು.
 ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಪ್ರಕೋಷ್ಠದ ಪ್ರಭಾರಿಗಳಾದ ಭಾನು ಪ್ರಕಾಶ್, ರಾಜ್ಯ ಸಂಘಟನಾ ಕಾರ್ಯದರ್ಶಿ 
ಅರುಣ್ ಜೀ, ಪ್ರಮುಖರಾದ  ಶಿವಯೋಗಿ ಉಪಸ್ಥಿತರಿದ್ದರು.
 
 
 
 
 
 
 
 
 

Leave a Reply