ಪ್ರೊ.ಎಂ.ಎಲ್. ಸಾಮಗರಿಗೆ ವಿಪ್ರ ವಿಭೂಷಣ ಪ್ರಶಸ್ತಿ ಪುರಸ್ಕಾರ

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ರಜತವರ್ಷದ ವಿಶೇಷ ಸಾಮಾಜಿಕ ಯೋಜನೆಯಾಗಿ ಈ ವರ್ಷದಿಂದ ಆರಂಭಿಸಿ ವಿಶಿಷ್ಟ ಸಾಧನೆಗೈದ ವಿಪ್ರ ಸಮಾಜದ ಓರ್ವ ಸಾಧಕರಿಗೆ ಪ್ರತಿ ವರ್ಷ ನೀಡಲಾಗುವ ವಿಪ್ರ ವಿಭೂಷಣ ಪ್ರಶಸ್ತಿಗೆ ಈ ಬಾರಿ ಶಿಕ್ಷಣ ತಜ್ಞ, ಸಾಂಸ್ಕೃತಿಕ ರಾಯ ಭಾರಿ, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ ಎಂ ಎಲ್ ಸಾಮಗ ಇವರು ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯನ್ನು ತಾ.08.01.2023 ರಂದು ಪರಿಷತ್ತಿನ ಬ್ರಾಹ್ಮಿ ಸಭಾಭವನದಲ್ಲಿ ನಡೆಯುವ 25ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಂದರ್ಭದಲ್ಲಿ ಪ್ರಧಾನ ಮಾಡಲಾಗುವುದು ಎಂದು ಪರಿಷತ್ತಿನ ಅಧ್ಯಕ್ಷರಾದ ಚೈತನ್ಯ ಎಂ. ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply