“ಸಾರ್ಪತ್ಯ ಆವೊಂದಿಪ್ಪೊಡು”- ಕೆ.ಎಲ್.ಕುಂಡಂತಾಯ

ವಿಲಕ್ಷಣ ತಾಯಿ – ಮಗ : ಸ್ತ್ರೀ ತನ್ನ ಬಯಕೆಯನ್ನು ಪುರುಷಾವಲಂಬನೆ ಇಲ್ಲದೆ ನೆರವೇರಿಸಿಕೊಳ್ಳುತ್ತಾಳೆ , ಮಗುವನ್ನು ಪಡೆಯು ತ್ತಾಳೆ .ಇದನ್ನು ಗಮನಿಸಿದ ಪುರುಷ ಸಿಟ್ಟಾಗುತ್ತಾನೆ. ಅಸೂಯೆಗೊಳ್ಳುತ್ತಾನೆ. ಚಿತ್ತಸ್ವಾಸ್ಥ್ಯ ಕಳೆದುಕೊಳ್ಳುತ್ತಾನೆ .ಜನಿಸಿದ ಮಗು – ಪುರುಷ ಸಂಘರ್ಷವೇರ್ಪಡುತ್ತದೆ​. ಆದರೆ ಪ್ರಕರಣ ಸುಖಾಂತ್ಯವಾಗುತ್ತದೆ . ಕತ್ತರಿಸಲ್ಪಟ್ಟ ತಲೆಗೆ ಆನೆಯ ಮುಖ ಜೋಡಿಸಿ ಮಗು ಗಜಾನನನಾಗುತ್ತಾನೆ. ಸ್ತ್ರೀಯ ನಿರ್ಬಂಧಕ್ಕೆ ಪುರುಷನು ಮಗುವನ್ನು ಒಪ್ಪಿಕೊಳ್ಳುತ್ತಾನೆ .ಇದು ಅನಿವಾರ್ಯವಾಗಿ ಅಲ್ಲ , ಪ್ರೀತಿ ಪೂರ್ವಕವಾಗಿ​. ನಿಗ್ರಹಿಸಲ್ಪಟ್ಟರೂ ಶಿವನ ಪ್ರಸನ್ನತೆಗೆ ಪ್ರಕೃತಿ ಕಾರಣವಾಗಿ ಗಣಪ ಏರಿದ ಎತ್ತರ ,ಪಡೆದ ಸ್ಥಾನಮಾನ ಪುರಾಣ ಗಳೇ ವಿವರಿಸುವಂತೆ ಅದು ವಿಸ್ತಾರವಾದುದು​. 
ಎಷ್ಟೇ ಮುನಿದರೂ ಕೊನೆಗೊಮ್ಮೆ ಪ್ರಕೃತಿಯನ್ನು ಪುರುಷ ಸಮೀಪಿಸಲೇ ಬೇಕಾಗುತ್ತದೆ, ಅನುಗ್ರಹಿಸುವುದು ಅನಿವಾರ್ಯ ವಾಗು ತ್ತದೆ. ಈ ಪ್ರಪಂಚ ನಿಯಮ‌ ಗಣೇಶನ ಜನನದಲ್ಲಿ‌ ಸಹಜವಾಗಿ ಅನಾವರಣಗೊಳ್ಳುತ್ತದೆ.​ ಪ್ರಕೃತಿಯ ನಿರೀಕ್ಷೆ ಮತ್ತು ಸಿದ್ಧತೆ‌ಯ ಸಂಕೇತವಾಗಿ ಗೌರಿ ಮೈಯ ಮಣ್ಣನ್ನು ಆಕೆ ತೆಗೆಯುವುದು ಮತ್ತು ಸ್ನಾನಕ್ಕೆ ಹೊರಡುವುದು. ಈ ನಡುವೆ ಮೈಯ ಮಣ್ಣಿಗೆ ರೂಪು ನೀಡಿ – ಜೀವ ಕೊಡುವುದು ಮತ್ತೆ ಪರಿಶುದ್ಧಳಾದುದನ್ನು ದೃಢೀಕರಿಸುತ್ತದೆ​. ಪುರುಷ ಪ್ರವೇಶ ಪ್ರಕೃತಿಯನಿರೀಕ್ಷೆಯಂತೆಯೇ ಆದರೆ ‘ಅಕಾಲ’ದಲ್ಲಿ ಆಗುತ್ತದೆ. ಸಮಾಗಮಕ್ಕೆ ತೊಡಕಾಗುವ ಮೈಯ ಮಣ್ಣು ಪ್ರತಿಮೆಯಾಗಿ ರೂಪು​ ಪಡೆದು ತಡೆಯುತ್ತದೆ .ಈ ಘಟನೆ ಭೂಮಿ – ಆಕಾಶ ಸಂಬಂಧವನ್ನು ನಿರೂಪಿಸುತ್ತಾ ವಿಶಾಲತೆಯನ್ನು ಒದಗಿಸಿ ಕೃಷಿ ಸಂಸ್ಕೃತಿಯ ಹುಟ್ಟು-ಬೆಳವಣಿಗೆಯನ್ನು ಮತ್ತು ಕೃಷಿ ಆಧರಿತ ಮಾನವ ಬದುಕನ್ನು ತೆರೆದಿಡುತ್ತದೆ.
         ಬೇಟೆಯೇ ಜೀವನಾಧಾರವಾಗಿದ್ದ ಕಾಲದಲ್ಲಿ ಮಾನವ ಬದುಕಿನ‌ ವಿವಿಧ ಹಂತಗಳಲ್ಲಿ ಭಿನ್ನ ಪರಿಕಲ್ಪನೆ ಅನುಸಂಧಾನ ದೊಂದಿಗೆ ಸಾಗಿ ಬಂದ ಗಣಪತಿ ಆರಾಧನೆ ಈ ಕಾಲಘಟ್ಟದಲ್ಲಿ ಈ ವಿಧಾನದಲ್ಲಿ ವಿಜೃಂಭಿಸುತ್ತಿದೆ.​ ​ಇತಿಹಾಸ ಕಾಲದಲ್ಲೂ ಗಣಪತಿ ಇಲಿ ರಹಿತನಾಗಿಯೇ ಮೊತ್ತಮೊದಲು ಕಾಣಸಿಗುತ್ತಾನೆ.​ ​ಅನಂತರ ಇಲಿಯ ಸಾಂಗತ್ಯ ಸಿಗುತ್ತದೆ . ಆದರೆ ಕೃಷಿಯೇ ಪ್ರಧಾನ ವಾದಾಗ ಗಣಪ ಬಹುವಾಗಿ ಪೂಜಿಸಲ್ಪಡುತ್ತಾನೆ .ಆಕರ್ಷಕ ಪ್ರತಿಮಾ ಲಕ್ಷಣಗಳ ವೈವಿಧ್ಯಮಯ ಗಣಪತಿ ಶಿಲಾಶಿಲ್ಪಗಳಲ್ಲಿ – ದಾರುಶಿಲ್ಪಗಳಲ್ಲಿ ಲಭ್ಯ .                            
        
  “ಸಾರ್ಪತ್ಯ ಆವೊಂದಿಪ್ಪೊಡು” ​ ಜನಪದರ ಹೆಣ್ಣು ಮೈಸಗೆಯನ್ನು‌ ಶಿವ ಪ್ರೀತಿಸುವುದು .ತಾವರೆ ಹೂವಾಗುವುದು​. ಗುಟ್ಟಿನಲ್ಲಿ ಜೊತೆಯಾಗುವುದು ಮುಂದುವರಿಯುವ ಕತೆಯಲ್ಲಿ ಭಾಮಕುಮಾರನ ಜನನ .ಈತ ಗಜಮುಖನಾಗುವುದು ಪಾರ್ವತಿ ಮಗುವನ್ನು ಸಾಕುವುದು . ಪಾರ್ವತಿ ಸಹಜವಾಗಿ ಮೈಸಗೆಯನ್ನು ಸ್ವೀಕರಿಸುವುದು.​ ​ಪ್ರತಿ ಮನೆಯಲ್ಲೂ ಗಣಪತಿ ಪೂಜೆ ನಡೆಯಬೇಕು​.  ಅಲ್ಲೆಲ್ಲ ಗಣಪತಿ “ಸಾರ್ಪತ್ಯ ಆವೊಂದಿಪ್ಪೊಡು” ಎಂಬುದು ಶಿವನ ವರ.​ ​ ಇದು ಭಾಮಕುಮಾರ ಸಂಧಿಯಲ್ಲಿ ಬರುವ ಕತೆ .  
            
 ಗಣಪನ ಹೊಟ್ಟೆ : ಕಣಜ , ಕಣಜಕ್ಕೆ ಸುತ್ತುವ ಹಗ್ಗ ( ಪೆರ್ಮರಿ) ಇವು ಗಣಪತಿಯ ಹೊಟ್ಟೆ ಮತ್ತು ಹೊಟ್ಟೆಗೆ ಸುತ್ತಿದ ಸರ್ಪವನ್ನು ಸಾಂಕೇತಿಸುತ್ತವೆ.​ ​ಅಕ್ಕಿ-ಭತ್ತಕ್ಕೆ ಹಾಗೂ ಇತರ ಬೆಳೆಗಳಿಗೆ ಇಲಿಕಾಟ ಸಹಜ( ಅರಿಬಾರ್ ಇತ್ತಿನಲ್ಪ ಎಲಿ ಪೆರ್ಗುಡೆ ಕಡಮೆನಾ ಇಂತಹ ಆಹಾರದ ರಕ್ಷಣೆಗಾಗಿ ಸರ್ಪ(ಹಗ್ಗ). ಗಣಪನ ಹೊಟ್ಟೆ ಕೃಷಿ ಸಮೃದ್ಧಿಯ ದಾಸ್ತಾನು . ಹೇಗಿದೆ ಜನಪದರ ಕಲ್ಪನೆ .
                 
ಬೆಣಚುಕಲ್ಲಿನ ‘ಬೆನಕ’​: ಗಣಪತಿ ಬೇಟೆ ಸಂಸ್ಕೃತಿಯ ಪ್ರತಿನಿಧಿ‌ : ​ ಗಣಪನ ಮೂರ್ತಿ ಶಿಲ್ಪದಲ್ಲೆ ಪಾಚೀನತೆಯನ್ನು ಗುರುತಿಸುವ ಸಂಶೋಧಕರು ಇವನ ಅಸ್ತಿತ್ವಕ್ಕೆ ಅಥವಾ ಕಲ್ಪನೆಗೆ ಬೇಟೆ ಸಂಸ್ಕೃತಿಯಷ್ಟು ಪಾಚೀನತೆಯನ್ನು ಅಥವಾ ಅದಕ್ಕಿಂತಲೂ ಪೂರ್ವದ ಜನಜೀವನದ ಕಾಲದವರೆಗೆ ಒಯ್ಯುತ್ತಾರೆ. ಬೇಟೆ , ಬೇಟೆಗೆ ಬಳಸುತ್ತಿದ್ದ  ಬೆಣಚುಕಲ್ಲು ಪ್ರಧಾನ ಆಯುಧ . ಇಲ್ಲಿಂದಲೇ  ಬೆಣಚು ಕಲ್ಲಿನಿಂದ “ಬೆನಕ” ಎಂದು ಪೂಜಿಸುವ ವಿಧಾನ ರೂಢಿಗೆ ಬಂದಿರಬಹುದು. ಈ ಶೈಲಿಯ ಪೂಜೆ ಈಗಲೂ ರೂಢಿಯಲ್ಲಿವೆ ವೈಭ ವದ ಮೂರ್ತಿಗಳ ಭವ್ಯತೆಯ ನೇಪಥ್ಯದಲ್ಲಿ ಈ ಬೆನಕನಿದ್ದಾನೆ. ಬೇಟೆಯ ಕಾಲಘಟ್ಟದಲ್ಲಿ ಆನೆಯ ಕಲ್ಪನೆ ಬಂದಿರಬಹುದು .

ಶ್ರಮ ಸಂಸ್ಕೃತಿ​:  ಶ್ರಮ ಸಂಸ್ಕೃತಿಯ ಸಂಕೇತವಾಗಿ ಗಣಪತಿ ಗುರುತಿಸಲ್ಪಡುವುದಿದೆ .ಶ್ರಮದಿಂದ ಮೈಬೆವರುತ್ತೆ , ಇದೇ ಮೈಯ ಮಣ್ಣಿಗೆ ಕಾರಣವಾಗುತ್ತದೆ .ಪಾರ್ವತಿಯ ಮೈಯ ಮಣ್ಣಿನಿಂದ ಗಣಪನ ಸೃಷ್ಟಿ .ಮಣ್ಣಿನ ಮಗನ ಕಲ್ಪನೆ ಎಷ್ಟು ಸುಂದರ .ಕಪಿಲ ವರ್ಣ , ಕಾವಿಬಣ್ಣ , ಮಣ್ಣಿನ ಬಣ್ಣ ,ಧೂಮ್ರವರ್ಣ , ಕಪ್ಪು – ಕೆಂಪು ಬಣ್ಣಗಳ ಸಂಯುಕ್ತ ಇದೂ ಮಣ್ಣಿನ ಬಣ್ಣವೆ .ಇದು ವಿಘ್ನೇಶನ ಮೈ ಬಣ್ಣ ​. ಕೃಷಿ ಸಂಸ್ಕೃತಿ: “ಸೆಗಣಿಯ ಗಣಪಂಗೆ ಸಂಪಗೆಯರಳಲ್ಲಿ ಪೂಜಿಸಿದರೆ” ಭೂಮಿಯ  ಫಲವತ್ತತೆಗಾಗಿ ಸೆಗಣಿ  – ಕೃಷಿಗೆ ಪೂರಕವಾಗಿ ಒದಗಿದ ಪಶುಪಾಲನೆ. ಸೆಗಣಿಗೆ ಹಸಿರು ಗರಿಕೆಯನ್ನು ಇಟ್ಟು ಪೂಜಿಸುವ ಗಣಪತಿಯ ಕಲ್ಪನೆ ಯೊಂದಿದೆ​. ಕಬ್ಬು ಪ್ರಧಾನವಾಗಿ ಆನೆಮುಖ ಹೊಂದಿರುವ ಸ್ವರೂಪದ ಆರಾಧನೆ . ಇವು ಜನಪದರ ಚಿಂತನೆಗಳು .

                                                

​​
 
 
 
 
 
 
 
 
 
 
 

Leave a Reply