ಆರೋಗ್ಯ ಪಾಲನೆ ಪ್ರತಿಯೊಬ್ಬ ನಾಗರಿಕನ ಮೂಲಭೂತ ಕರ್ತವ್ಯ. ನಿತ್ಯ ವ್ಯಾಯಾಮ, ಮಿತ ಆಹಾರ, ಶಿಸ್ತುಬದ್ಧ ದಿನಚರಿ ಹಾಗೂ ನಿಯಮಿತ ಆರೋಗ್ಯ ತಪಾಸಣೆ ಆರೋಗ್ಯದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ,ಬುಡೋ ಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಗೌರವಾಧ್ಯಕ್ಷ ಡಾ| ನಿ.ಬೀ. ವಿಜಯ ಬಲ್ಲಾಳ್ ಹೇಳಿದರು.
ಅವರು ರವಿವಾರ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ, ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇವರ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಅಭಯ ಹಸ್ತ ಹೆಲ್ಪ್ಲೈನ್ ಉಡುಪಿ ಇವರ ಸಹಯೋಗದೊಂದಿಗೆ ಅಂಬಲಪಾಡಿ ದೇವಳದ ಜನಾರ್ದನ ಮಂಟಪದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಮತ್ತು ಆರೋಗ್ಯ ಜಾಗೃತಿ ಮಾಹಿತಿಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ ಮತ್ತು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಇದರ ಡೀನ್ ಡಾ| ಜಿ.ಅರುಣ್ ಮಯ್ಯ ಮಾತನಾಡಿ, ರಕ್ತದಾನ ಜೀವದಾನಕ್ಕೆ ಸಮಾನ. ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದಾಗ ರಕ್ತದಕೊರತೆ ನೀಗಿಸಲು ಸಾಧ್ಯ.
ಮುಖ್ಯ ಅತಿಥಿಗಳಾದ ಕಸ್ತೂರ್ಬಾ ಆಸ್ಪತ್ರೆ ರಕ್ತ ಕೇಂದ್ರ ಮಣಿಪಾಲ ಇದರ ನಿರ್ದೇಶಕಿ ಡಾ| ಶಮೀ ಶಾಸ್ತ್ರೀ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘ(ರಿ.) ಅಧ್ಯಕ್ಷ ರವಿ ಸಾಲ್ಯಾನ್ ಪಡುಕರೆ ಮಾತನಾಡಿದರು.
ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷ ಹಾಗೂ ಕರಾಟೆ ಮುಖ್ಯ ಶಿಕ್ಷಕ ವಾಮನ್ ಪಾಲನ್ ಅಂಬಲಪಾಡಿ, ಬಿರುವೆರ್ ಕುಡ್ಲ(ರಿ.) ಉಡುಪಿ ಘಟಕ ಅಧ್ಯಕ್ಷ ಕಿಶೋರ್ ಕುಮಾರ್, ಚೈತನ್ಯ ಸೋಷಿಯಲ್ ವೆಲ್ಫೇರ್ ಫೌಂಡೇಶನ್(ರಿ.).
ಮೆನೇಜಿಂಗ್ ಟ್ರಸ್ಟಿ ಸುನಿಲ್ ಸಾಲ್ಯಾನ್ ಕಡೆಕಾರ್, ಯುವಕ ಮಂಡಲ(ರಿ.) ಹಿರಿಯರ ವೇದಿಕೆ ಅಂಬಲಪಾಡಿ ಅಧ್ಯಕ್ಷ ಹರೀಶ್ ಪಾಲನ್ ಕಪ್ಪೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಬಿಲ್ಲವ ಸೇವಾ ಸಂಘ(ರಿ.) ಕಡೆಕಾರು ಕಾರ್ಯದರ್ಶಿ ಸುರೇಂದ್ರ ಪೂಜಾರಿ, ಸ್ವಸ್ತಿ ಕ್ರಿಕೆಟರ್ಸ್ ಅಂಬಲಪಾಡಿ ಅಧ್ಯಕ್ಷ ಅಜಿತ್ ಕುಮಾರ್ ಕಪ್ಪೆಟ್ಟು. ಉಪಸ್ಥಿತರಿದ್ದರು.
ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಉಪಾಧ್ಯಕ್ಷೆ ದಿವ್ಯಾ ಹೆಚ್. ಸ್ವಾಗತಿಸಿ, ಕಾರ್ಯದರ್ಶಿ ಮೇಘಾ ವಂದಿಸಿದರು. ಸಂಘಟನಾ ಕಾರ್ಯದರ್ಶಿ ಪವನ್ ಕುಮಾರ್ ಕಾರ್ಯಕ್ರಮ ನಿರೂಪಿದರು.