ಅಂಬಲಪಾಡಿ ಯಕ್ಷಗಾನ ಶಿಬಿರ ಸಮಾರೋಪ

ಉಡುಪಿ ಅಂಬಲಪಾಡಿಯ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾಮಂಡಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಅಂಬಲಪಾಡಿಯ ಕಂಬ್ಳಕಟ್ಟದಲ್ಲಿರುವ
ಸoಸ್ಥೆಯ ಜನಾರ್ದನ ಮಂಟಪದಲ್ಲಿ ಹತ್ತು ದಿನಗಳ ಪರ್ಯಂತ ನಡೆಸಿದ ‘ಯಕ್ಷಗಾನ ಶಿಬಿರ’ ಇಂದು (೦೪-೦೫-೨೦೨೩) ಸಮಾಪನಗೊಂಡಿತು. ಶಿಬಿರದಲ್ಲಿ 56 ವಿದ್ಯಾರ್ಥಿಗಳು
ಪಾಲ್ಗೊಂಡಿದ್ದು, ಎಲ್ಲರಿಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಕೆ. ಅಜಿತ್ ಕುಮಾರ್ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ಎಸ್. ವಿ. ಭಟ್, ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಪ್ರಮಾಣಪತ್ರ ವಿತರಿಸಿದರು.
ಸಂಸ್ಥೆಯ ಉಪಾಧ್ಯಕ್ಷ ಕೆ. ಜೆ. ಗಣೇಶ್, ಕೆ. ಜೆ. ಕೃಷ್ಣ, ಗೋವಿಂದ ಭಂಡಾರಿ ಉಪಸ್ಥಿತರಿದ್ದರು. ಶಿಬಿರದ ನಿರ್ದೇಶಕರಾದ ಕೋಟ ನರಸಿಂಹ ತುಂಗರನ್ನು ಶಾಲು
ಹೊದಿಸಿ ಗೌರವಿಸಲಾಯಿತು.

ಬಳಿಕ ವಿದ್ಯಾರ್ಥಿಗಳಿಂದ ಪೂರ್ವರoಗದ ಪ್ರಾತ್ಯಕ್ಷಿಕೆ ಜರಗಿತು. ಮೇ ೬ರಿಂದ
ವಿದ್ಯಾರ್ಥಿಗಳಿಗೆ ಬಣ್ಣಗಾರಿಕೆ ಕಮ್ಮಟ ಜರಗಲಿದೆ ಎಂದು ಅಧ್ಯಕ್ಷರು ತಿಳಿಸಿದರು.

 
 
 
 
 
 
 
 
 
 
 

Leave a Reply