ಬಂಟಕಲ್ಲು ಶ್ರೀದುರ್ಗಾ ಮಹಿಳಾ ಚಂಡೆಬಳಗದ ವತಿಯಿಂದ ಬಳಗದ ಅಧ್ಯಕ್ಷೆ ಗೀತಾ ವಾಗ್ಲೆ ಯವರ ನೇತೃತ್ವದಲ್ಲಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಪ್ರಯುಕ್ತ ಕೊರೋನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯಾಧಿಕಾರಿ ಗಳಾದ ಡಾ. ಅಪರ್ಣಾ ಬಾಲನ್, ಡಾ.ಕೃಷ್ಣಮೂರ್ತಿರವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ಸಹಾಯಕಿ ಸರಳಾ, ಚಂಡೆಬಳಗದ ಭವಾನಿ, ಆಶಾ ನಾಯಕ್, ಸಂಗೀತಾಕೃಷ್ಣಮೂರ್ತಿ, ಶಕುಂತಳ ಪ್ರಭು,ಇಲಾಖೆಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.