ಬಾರಕೂರು ಪರಿಸರ ಜಾಗೃತಿ ಕಾರ್ಯಕ್ರಮ

ಬಾರಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಬ್ರಹ್ಮಾವರ, ಬಾರಕೂರು ವಲಯದ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಬಾರಕೂರು ಹಿಂದೂ ರುದ್ರ ಭೂಮಿಯಲ್ಲಿ ಹಮ್ಮಿಕೊಳ್ಳಲಾಯಿತು. 

ಬಾರ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಾಂತರಾಮ ಶೆಟ್ಟಿಯವರು ಗಿಡ ನೆಡುವುದರ ಮೂಲಕ ಚಾಲನೆ ನೀಡಿ, ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಲಯ ಮೇಲ್ವಿಚಾರಕಿ ಶ್ರೀಮತಿ ಶಾಂತರವರು ಕಾರ್ಯಕ್ರಮದ ಉದ್ದೇಶ ಹಾಗೂ ಗಿಡದ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.

ಬಾರ್ಕೂರ್ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಉಷಾ, ಪಂಚಾಯತ್ ಸದಸ್ಯರಾದ ಶರಣು , ಬಾರ್ಕೂರು ವಲಯ ಒಕ್ಕೂಟ ಅಧ್ಯಕ್ಷ ರಾದ ಗೌರಿ ಪೂಜಾರಿ, ವಿಪತ್ತು ನಿರ್ವಹಣೆಯ ತಂಡಕ್ಕೆ ಆಯ್ಕೆಯಾದ ಸದಸ್ಯರು,ಬಾರಕೂರು ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು. 

ರುದ್ರಭೂಮಿ ಆವರಣವನ್ನು ಸ್ವಚ್ಛಗೊಳಿಸಿ, ವಿವಿಧ ಔಷಧಿ ಗಿಡಗಳು ಹಾಗೂ ಇತರ ಗಿಡಗಳನ್ನು ನೆಟ್ಟು ಗಿಡಗಳಿಗೆ ಬೇಲಿ ಮಾಡಲಾಯಿತು. ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕರು ನಿರೂಪಣೆ ಮಾಡಿ ಸೇವಾಪ್ರತಿನಿಧಿ ಪೂರ್ಣಿಮರವರು ಸ್ವಾಗತಿಸಿ, ಗೌರಿ ಪೂಜಾರಿಯವರು ವಂದನಾರ್ಪಣೆ ಮಾಡಿದರು.    ~ ನಾಗರಾಜ್ ಆಲ್ತಾರ್ 

 
 
 
 
 
 
 
 
 
 
 

Leave a Reply