ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದಿಂದ ಆಹಾರ ಸಾಮಾಗ್ರಿ ಕಿಟ್ ವಿತರಣೆ

ಕುಂದಾಪುರ: ಭಾರತೀಯ ವಿಕಾಸ ಟ್ರಸ್ಟ್, ಮೂಲಕ ಕುಂದಾಪುರ ತಾಲೂಕು ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳಿಕಟ್ಟೆಯಲ್ಲಿ, ರಾಷ್ಟಿಯ ಹೆದ್ದಾರಿ ಸಮೀಪ ವಾಸವಾಗಿರುವ ವಲಸೆ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್ ಗಳನ್ನು ವಿತರಿಸಲಾಯಿತು.

ಬಿವಿಟಿಯ ಹಿರಿಯ ಸಲಹೆಗಾರ ಶ್ರೀಕಾಂತ ಹೊಳ್ಳ, ಮಾತನಾಡಿ ನಮ್ಮ ಸಂಸ್ಥೆಯ ಮೂಲಕ ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಗಳ ಜೊತೆ ಸೇರಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಇದರ ಭಾಗವಾಗಿ ಇಂದು ಆಹಾರ ಸಾಮಾಗ್ರಿ ಕಿಟ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು. 

ಹೊಸಾಡು ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಾರ್ವತಿ ಉಪಸ್ಥಿತರಿದ್ದರು. ಬಿವಿಟಿಯ ಮಾಸ್ಟರ್ ಟ್ರೈನರ್ ಸುಧೀರ್ ಕುಲಕರ್ಣಿಯ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿವಿಟಿಯ ಮುಖ್ಯ ವ್ಯವಸ್ಥಾಪಕ ಮನೋಹರ ಕಟ್ಗೇರಿ, ಅರುಣ್, ರಾಘವೇಂದ್ರ ಆ ಚಾರ್ಯ,ಸುರೇಶ್, ಹಾಗೂ ಸೆಲ್ಕೋದ ಹಿರಿಯ ವ್ಯವಸ್ಥಾಪಕ ಶೇಖರ ಶೆಟ್ಟಿ, ಸೆಲ್ಕೋ ಶಾಖಾಧಿಕಾರಿ ಮಂಜುನಾಥ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply