ಉಡುಪಿ ಕಿನ್ನಿಮೂಲ್ಕಿ ಕನ್ನರ್ಪಾಡಿ ಬ್ರಾಹ್ಮಣ ಸಂಘದ ವಾರ್ಷಿಕ ಮಹಾ ಸಭೆಯು ಕೆ ನಾಗೇಶ್ ಭಟ್ ಅಧ್ಯಕ್ಷತೆಯಲ್ಲಿ ಶನಿವಾರ ಕಿನ್ನಿಮೂಲ್ಕಿಯ ಶ್ರೀ ದೇವೀ ಸಭಾಭವನದಲ್ಲಿ ಜರಗಿತು.
ನೂತನ ಅಧ್ಯಕ್ಷರಾಗಿ ಎಂ ಎನ್ ರಾಜೇಂದ್ರ, ಕಾರ್ಯದರ್ಶಿಯಾಗಿ ಮಂಚಿ ಸುರೇಶ್ ರಾವ್, ಖಜಾಂಚಿಯಾಗಿ ಶ್ರೀ ಕಾಂತ ಭಟ್ ರವರು ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆಗೊಂಡರು. ವೆಂಕಣ್ಣ ಆಚಾರ್ಯ, ಸಂಘದ ಪದಾಧಿಕಾರಿಗಳು ಉಪಸ್ಥರಿದ್ದರು.
ಈ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ಶ್ರೀ ಮತಿ ಭಾರತಿ ಭಟ್ ರವರಿಗೆ ಗೌರವಾರ್ಪಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಂಘದ ಸದಸ್ಯರಲ್ಲಿ ವಿವಾಹ ವಾಗಿ ಐವತ್ತು ವರ್ಷ ಮೇಲ್ಪಟ್ಟ ಹಿರಿಯ ದಂಪತಿಗಳನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.