ಉಡುಪಿ ಬ್ರಾಹ್ಮಿ ಸಭಾಭವನ ಲೋಕಾರ್ಪಣೆ ಪೂರ್ವಭಾವಿ ಸಭೆ – ಶಾಸಕ ರಘುಪತಿ ಭಟ್ ಭಾಗಿ

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.) ಇದರ ಬ್ರಾಹ್ಮಿ ಸಭಾಭವನ ಲೋಕಾರ್ಪಣೆ ಕಾರ್ಯಕ್ರಮದ ಪೂರ್ವಭಾವಿ ಸಭೆ ಇಂದು ದಿನಾಂಕ 17-11-2020 ರಂದು ಉಡುಪಿ ಗುಂಡಿಬೈಲಿನ ಬ್ರಾಹ್ಮಿ ಸಭಾಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.) ಕಟ್ಟಡ ಸಮಿತಿ ಗೌರವಾಧ್ಯಕ್ಷ, ಶಾಸಕ ಶ್ರೀ ಕೆ. ರಘುಪತಿ ಭಟ್ ಭಾಗವಹಿಸಿದರು.ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.) ಇದರ ಅಧ್ಯಕ್ಷ ವಿಷ್ಣುಪ್ರಸಾದ್ ಪಾಡಿಗಾರ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಉಪಾಧ್ಯ, ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ರಂಜನ್ ಕಲ್ಕೂರ್, ಪ್ರಧಾನ ಕಾರ್ಯದರ್ಶಿ ಎಂ.ಎಸ್ ವಿಷ್ಣು, ಕಾರ್ಯದರ್ಶಿ ಚಂದ್ರಕಾಂತ್ ಕೆ.ಎನ್, ಕೋಶಾಧಿಕಾರಿ ಕುಮಾರಸ್ವಾಮಿ ಉಡುಪ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply