ಡಾll ವಿ. ಎಸ್. ಆಚಾರ್ಯ ಸ್ಕೌಟ್ಸ್ ಗೈಡ್ಸ್ ತರಬೇತಿ ಕೇಂದ್ರ ಉದ್ಘಾಟನೆ

ಉಡುಪಿ ಅಲೆವೂರು ಪ್ರಗತಿ ನಗರದಲ್ಲಿ ಇಂದು ದಿನಾಂಕ 31-03-2022 ರಂದು ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇದರ ಡಾll ವಿ. ಎಸ್. ಆಚಾರ್ಯ ಸ್ಕೌಟ್ಸ್ ಗೈಡ್ಸ್ ತರಬೇತಿ ಕೇಂದ್ರ ಉದ್ಘಾಟನೆ ಹಾಗೂ ಆವರಣ ಗೋಡೆಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.

 

ಕಾಣಿಯೂರು ಮಠದ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಆಶೀರ್ವಚಿಸಿದರು.

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿಯ ಮುಖ್ಯ ಆಯುಕ್ತರು ಶಾಂತ ವಿ.ಎಸ್ ಆಚಾರ್ಯ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರ್ನಾಟಕ ಸರಕಾರದ ಮಾಜಿ ಗೃಹ ಸಚಿವರು, ರಾಜ್ಯ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ ಬೆಂಗಳೂರು ಮುಖ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯ, ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ. ಮೋಹನ್ ಆಳ್ವ, ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಕಿಶೋರ್ ಆಳ್ವ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಶ್ಯಾಮಲಾ ಕುಂದರ್, ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಉಡುಪಿಯ ಜಿಲ್ಲಾ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply