ಬ್ರಹ್ಮಾವರ ಬ್ಲಾಕ್ ​ಅಧ್ಯಕ್ಷ  ದಿನಕರ್ ಹೇರೂರ್ ಗೆ ಅಭಿನಂದನೆ


ಉಡುಪಿ: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ದಿನಕರ್ ಹೇರೂರ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ಸಮ್ಮುಖ ದಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಅಭಿನಂದಿಸಲಾಯಿತು.​ ಈ ವೇಳೆ ಮಾತನಾಡಿದ ದಿನಕರ್ ಹೇರೂರು ಅವರು ನನಗೆ ಈ ಬ್ಲಾಕ್ ಕಾಂಗ್ರೆಸಿಗೆ ಅಧ್ಯಕ್ಷರಾಗಿ ಆಯ್ಕೆಯಾಗಲು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ ಹಾಗೂ ಬ್ಲಾಕಿನ ಎಲ್ಲಾ ನಾಯಕರು, ಹಾಗೂ ಕಾರ್ಯಕರ್ತರು ಪ್ರಮುಖವಾಗಿ ಕಾರಣೀಕರ್ತರಾಗಿದ್ದಾರೆ. 
 
ಮುಂದೆಯೂ ಕೂಡ ಪಕ್ಷದ ಬೆಳವಣಿಗೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.​ ಈ ವೇಳೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ನಾಯಕರಾದ ರಾಜು ಪೂಜಾರಿ, ನಿತ್ಯಾನಂದ ಶೆಟ್ಟಿ, ಮೈರ್ಮಾಡಿ ಸುಧಾಕರ ಶೆಟ್ಟಿ, ಡಾ ಸುನೀತಾ ಶೆಟ್ಟಿ, ನಿತ್ಯಾನಂದ ಕೆಮ್ಮಣ್ಣು, ರವಿರಾಜ್ ಶೆಟ್ಟಿ, ಉಮೇಶ್ ಶೆಟ್ಟಿ, ಮಹೇಶ್ ಮೊಯ್ಲಿ, ಸೂರ್ಯ ಸಾಲ್ಯಾನ್, ರೋಶನಿ ಒಲಿವೇರಾ ಹಾಗೂ ಇತರರು ಉಪಸ್ಥಿತರಿದ್ದರು.​​
 
 
 
 
 
 
 
 
 
 
 

Leave a Reply