ವಿಪ್ರ ಸಂಘಟನೆಗಳು ಆಶಕ್ತರು, ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವುದು ಶ್ಲಾಘನೀಯ~ ವಾಸುದೇವ ಅಡೂರು

ಚಿಟ್ಪಾಡಿ ವಲಯ ಬ್ರಾಹ್ಮಣ ಸಭಾದ ವಾರ್ಷಿಕ ಮಹಾಸಭೆಯು ಚಿಟ್ಪಾಡಿ ಶ್ರೀನಿವಾಸ ದೇವಸ್ಥಾನ ದಲ್ಲಿ ಜರುಗಿತು. ಎಸ್ ಎಸ್ ಎಲ್ ಸಿ, ಪಿ ಯು ಸಿ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಮುಖ್ಯ ಅತಿಥಿ ಜಿಲ್ಲಾ ಮಹಾ ಬ್ರಾಹ್ಮಣ ಪರಿಷತ್ ಸಂಚಾಲಕ ವಾಸುದೇವ ಅಡೂರು ಮಾತನಾಡಿ ಸಮಾಜದಲ್ಲಿ ಸಂಘಟನೆಯಿಂದ ಮಾಡುವ ಕಾರ್ಯಗಳಿಗೆ ಸದಾ ಬಲವಿದೆ.
 
ವಿಪ್ರ ಸಂಘಟನೆಗಳು ಆಶಕ್ತರು, ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವುದು ಶ್ಲಾಘನೀಯ ಎಂದರು. ಸಭಾದ ಗೌರವಾಧ್ಯಕ್ಷ ಡಾ.ಗೋಪಾಲಕೃಷ್ಣ ಬಲ್ಲಾಳ್ ರವರು ಅರ್ಹ ಬಡ ವಿದ್ಯಾರ್ಥಿಗಳಿಗೆ ಕೊಡಮಾಡಿದ ವಿದ್ಯಾರ್ಥಿ ವೇತನವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.
 
ವಿಶೇಷ ಸೇವೆ ಮಾಡಿದ ಗಣ್ಯರನ್ನು ಸಮ್ಮಾನಿಸಲಾಯಿತು. ಅಧ್ಯಕ್ಷ ಅಗರಿ ಭಾಸ್ಕರ್ ರಾವ್ ಸ್ವಾಗತಿಸಿದರು .ಕಾರ್ಯದರ್ಶಿ ಪದ್ಮನಾಭ ಮದ್ಯಸ್ಥ ವರದಿ ವಾಚಿಸಿದರು. ಕೋಶಾಧಿಕಾರಿ ಕೃಷ್ಣ ಭಟ್ ಲೆಕ್ಕ ಪತ್ರ ಮಂಡಿಸಿದರು. ಸ್ಥಾಪಕಾಧ್ಯಕ್ಷ ಪ್ರೋ ವೇಣುಗೋಪಾಲ್ ಮುಳ್ಳೇರಿಯಾ ನಿರೂಪಿಸಿದರು. ನೂತನ ಕಾರ್ಯದರ್ಶಿ ಮಧ್ವರಾಜ್ ಭಟ್ ವಂದಿಸಿದರು. 
 
 
 
 
 
 
 
 
 
 
 

Leave a Reply