ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು) ಇಂದು ತಮ್ಮ ಬೇಡಿಕೆ ಗಳನ್ನು ಈಡೇರಿಸಲು ಒತ್ತಾಯಿಸಿ ಮಣಿಪಾಲ ದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಕಾರ್ಮಿಕ ಅಧಿಕಾರಿ ಯವರಿಗೆ ಮನವಿ ನೀಡಲಾಯಿತು.
ಪ್ರತಿಭಟನೆ ಯಲ್ಲಿ ಕಟ್ಟಡ ಸಂಘದ ರಾಜ್ಯ ಉಪಾಧ್ಯಕ್ಷ ರಾದ ಬಾಲಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷ ರಾದ ಶೇಖರ್ ಬಂಗೇರ,ಗೌರವ ಅಧ್ಯಕ್ಷ ರಾದ ದಯಾನಂದ ಕೋಟ್ಯಾನ್,ಖಂಜಾಚಿ ಗಣೇಶ್ ನಾಯಕ್,ಉಪಾಧ್ಯಕ್ಷ ರಾದ ಶಶಿಧರ್ ಗೊಲ್ಲ, ಸುಭಾಷ್ ನಾಯಕ್,ವಾಮನ ಪೂಜಾರಿ, ವಾಮನ ಅಮೀನ್, ರಾಮ ಸಾಲ್ಯಾನ್,ರಾಮ ಕಾರ್ಕಡ, ಸಿಐಟಿಯು ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಕವಿರಾಜ್. ಎಸ್ ಉಪಸ್ಥಿತರಿದ್ದರು.