ಲಾಭಾಂಶ ವಿತರಣೆ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ – ಶಾಸಕ ರಘುಪತಿ ಭಟ್ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಉಡುಪಿ ಅಂಬಾಗಿಲು ವಲಯ ವತಿಯಿಂದ ಪರಮಪೂಜ್ಯ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ  ಶುಭಾಶೀರ್ವಾದಗಳೊಂದಿಗೆ ನಡೆಯುವ “ಲಾಭಾಂಶ ವಿತರಣೆ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ” ಉದ್ಘಾಟನೆಯನ್ನು ಶುಕ್ರವಾರ  ಶಾಸಕ ಕೆ.ರಘುಪತಿ ಭಟ್  ನೆರವೇರಿಸಿದರು.

ಈ ಸಂದರ್ಭದಲ್ಲಿ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಅಂಬಲಪಾಡಿ ಇದರ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಕರಾವಳಿ ಪ್ರಾದೇಶಿಕ ಕಚೇರಿ ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಸುವರ್ಣ, ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಸಮಿತಿ ಸದಸ್ಯ ಶಿವಕುಮಾರ್ ಅಂಬಲಪಾಡಿ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲೂಕು ಯೋಜನಾಧಿಕಾರಿ ರೋಹಿತ್ ಹೆಚ್. ಜನಜಾಗೃತಿ ಯೋಜನಾಧಿಕಾರಿಗ ತಿಮ್ಮಯ್ಯ ನಾಯ್ಕ್, ಅಂಬಾಗಿಲು ವಲಯ ಮೇಲ್ವಿಚಾರಕ ಜಯಕರ್, ಸೇವಾ ಪ್ರತಿನಿಧಿಗಳು ಹಾಗೂ ಸ್ವಸಹಾಯ ಸಂಘಗಳ ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply