ಯಕ್ಷಗಾನ ಕಲಾರಂಗಕ್ಕೆ ಭೇಟಿ ನೀಡಿದ ಉದ್ಯಮಿ ಎಚ್. ಎಸ್. ಶೆಟ್ಟಿ

ಉಡುಪಿ: ಮೈಸೂರು ಮರ್ಕಂಟೈಲ್ ಕಂ. ಲಿ. ನ ಆಡಳಿತ ನಿರ್ದೇಶಕ ಎಚ್. ಎಸ್. ಶೆಟ್ಟಿ ಕಲಾರಂಗಕ್ಕೆ ಭೇಟಿ ನೀಡಿ ಸಂಸ್ಥೆಯ ಚಟುವಟಿಕೆಯನ್ನು ವೀಕ್ಷಿಸಿದರು.

ಬೆಂಗಳೂರಿನ ವೈದ್ಯವಿಜ್ಞಾನಿ ಡಾ. ರಾಜಾ ವಿಜಯ್ ಕುಮಾರ್ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ಶಾಲು-ಸ್ಮರಣಿಕೆ ನೀಡಿ ಗೌರವಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ವಿವರಿಸಿದರು.

ಇದಕ್ಕೂ ಮೊದಲು ಉಭಯರು ಸಂಸ್ಥೆಯ ಸಾಧನೆಯನ್ನು ಒಳಗೊಂಡಿರುವ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು. ಸಂಸ್ಥೆಯ ವ್ಯಾಪಕವಾದ ಕಾರ್ಯಚಟುವಟಿಕೆಯನ್ನು ಶ್ಲಾಘಿಸಿ ಸಾಮಾಜಿಮುಖಿಯಾಗಿ ಮಾಡುತ್ತಿರುವ ಕೆಲಸಗಳನ್ನು ಅಭಿನಂದಿಸಿದರು. ಸಂಸ್ಥೆಯ ಪ್ರಕಟಣೆಯ ಹೊತ್ತಗೆಗಳನ್ನು ನೀಡಲಾಯಿತು. 

ನಿಕಟಪೂರ್ವ ಅಧ್ಯಕ್ಷ ಕೆ. ಗಣೇಶ್ ರಾವ್, ಉದ್ಯಮಿ ಯು. ವಿಶ್ವನಾಥ ಶೆಣೈ, ಪದಾಧಿಕಾರಿಗಳಾದ ಎಸ್. ವಿ. ಭಟ್, ವಿ.ಜಿ. ಶೆಟ್ಟಿ, ಮನೋಹರ ಕೆ., ಕೆ. ಸದಾಶಿವ ರಾವ್, ಎಚ್. ಎನ್. ಶೃಂಗೇಶ್ವರ ಹಾಗೂ ಸಂಸ್ಥೆಯ ಸದಸ್ಯರಾದ ಬಿ.ಭುವನಪ್ರಸಾದ್ ಹೆಗ್ಡೆ, ಅನಂತರಾಜ್ ಉಪಾಧ್ಯ, ಕಿಶೋರ್ ಸಿ. ಉದ್ಯಾವರ, ಕೆ. ಅಜಿತ್ ಕುಮಾರ್, ಅಶೋಕ್ ಎಮ್, ಉಪಸ್ಥಿತರಿದ್ದರು. ನಾರಾಯಣ ಎಂ. ಹೆಗಡೆ ವಂದಿಸಿದರು.

 
 
 
 
 
 
 
 
 
 
 

Leave a Reply