ಡಾ. ಎಂ. ಹರಿಶ್ಚಂದ್ರ ದಂಪತಿಗಳಿಂದ ಯಕ್ಷಗಾನ ಕಲಾರಂಗ ಭೇಟಿ

ಉಡುಪಿಯ ಪ್ರಸಿದ್ಧ ಗಾಂಧಿ ಆಸ್ಪತ್ರೆಯ ವರಿಷ್ಠರಾದ ಡಾ. ಎಂ. ಹರಿಶ್ಚಂದ್ರ ಮತ್ತು ಶ್ರೀಮತಿ ಲಕ್ಷ್ಮೀ ಹರಿಶ್ಚಂದ್ರ ದಂಪತಿಗಳು ಯಕ್ಷಗಾನ ಕಲಾರಂಗದ ಕಛೇರಿಗೆ ಅಕ್ಟೋಬರ್ 5,2022 ರಂದು ಭೇಟಿ ನೀಡಿ ಸಂಸ್ಥೆಯ ಕಾರ್ಯವೈಖರಿ ವೀಕ್ಷಿಸಿ ಶ್ಲಾಘಿಸಿದರು. ಪಂಚಮಿ ಟ್ರಸ್ಟ್ ವತಿಯಿಂದ ವಿದ್ಯಾಪೋಷಕ್‍ಗೆ ವಿಶೇಷ ಆರ್ಥಿಕ ನೆರವು ನೀಡಿದರು.

ಸಂಸ್ಥೆಯ ಮನೆ ನಿರ್ಮಾಣದ ಯೋಜನೆಯ ಅಡಿಯಲ್ಲಿ ಈಗಾಗಲೇ ಒಂದು ಮನೆಯ ಪ್ರಾಯೋಜಕತ್ವ ವಹಿಸಿದ್ದು ಮುಂದೆಯೂ ಈ ಯೋಜನೆಗೆ ಸಹಕರಿಸುವುದಾಗಿ ತಿಳಿಸಿದರು. ಅಕ್ಟೋಬರ್ 5 ಗಾಂಧಿ ಆಸ್ಪತ್ರೆಯ ಸ್ಥಾಪನಾ ದಿನ ಹಾಗೂ ಅವರ ಶುಭವಿವಾಹದ 27ನೇ ವರ್ಷವಾಗಿದ್ದು ಇದರ ನಿಮಿತ್ತ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಶುಭಕೋರಿ ಶಾಲು ಹೊದಿಸಿ ಗೌರವಿಸಿದರು. ಸಂಸ್ಥೆಯ ಉಪಾಧ್ಯಕ್ಷರುಗಳಾದ ಎಸ್. ವಿ. ಭಟ್, ವಿ.ಜಿ. ಶೆಟ್ಟಿ, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply