ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಹುತಾತ್ಮರ ಅಭಿಯಾನಕ್ಕೆ ಚಾಲನೆ

ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಕರ್ನಾಟಕದ ಸಂಸ್ಥಾಪಕ ಅಧ್ಯಕ್ಷ ಸುರೇಶ್ ಗೋಕಾಕ್ ನೇತೃತ್ವದಲ್ಲಿ ನಡೆದ ಹುತಾತ್ಮರ ಅಭಿಯಾನಕ್ಕೆ ಹುಬ್ಬಳ್ಳಿಯ ಮೂರುಸಾವಿರ ಮಠದ ಮಹಾಸ್ವಾಮಿಗಳಿಂದ ಚಾಲನೆ ದೊರೆಯಿತು.

ಗಣರಾಜ್ಯೋತ್ಸವದಂದು ಸಂಗೊಳ್ಳಿ ರಾಯಣ್ಣನ ಸಮಾಧಿಯಿಂದ ರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಹಾಂತಯ್ಯ ಸ್ವಾಮಿ ಶಾಸ್ತ್ರಿಗಳು ಮಾತನಾಡಿ ಇಂದಿನ ಯುವ ಪೀಳಿಗೆಗೆ ಮಾದರಿಯಾದ ಸುರೇಶ್ ಗೋಕಾಕ್ ಅವರನ್ನು ಶ್ಲಾಘಿಸಿದರು.ವೀರಯೋಧ ಕೃಷ್ಣ ರನ್ನು ಸನ್ಮಾನಿಸಲಾಯಿತು.ಇತಿಹಾಸ ಸೃಷ್ಟಿಸಿದ ಬೆಳಗಾವಿಯ ಪಿರಣವಾಡಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಜಿಲ್ಲಾ ವತಿಯಿಂದ ಹುತಾತ್ಮ ದಿನದ ಅಂಗವಾಗಿ ಸಂಘದ ಅಧ್ಯಕ್ಷ ಶ್ರೀ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಮಾಲಾರ್ಪಣೆ ಮಾಡಿದರು.

ಸಂಘದ ಮಹಿಳಾ ಅಧ್ಯಕ್ಷೆ ಸವಿತಾ ನೋಟಗಾರ, ಉಪಾಧ್ಯಕ್ಷ ಈರಪ್ಪ ಗೌಂಡಿ ಬಸವರಾಜ್ ಐಹೊಳೆ ಶರಣಪ್ಪ ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply