ಸಾಫಲ್ಯ ಟ್ರಸ್ಟ್ ವತಿಯಿಂದ‌ ನೀಡಲ್ಪಟ್ಡ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ

ಉಡುಪಿ: ಸಾಫಲ್ಯ ಟ್ರಸ್ಟ್ ವತಿಯಿಂದ ಜಾನುವಾರುಕಟ್ಟೆ ಸರಕಾರಿ ಪ್ರೌಢಶಾಲೆಗೆ ನೀಡಲ್ಪಟ್ಡ ಶುದ್ಧ ಕುಡಿಯುವ ನೀರಿನ ಘಟಕವನ್ನು ಟ್ರಸ್ಟ್ ಅಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.ಬಳಿಕ ಮಾತನಾಡಿ ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಆರೋಗ್ಯದ ಕುರಿತು ಹೆಚ್ಚಿನ ಗಮನ ಹರಿಸುವಂತೆ ತಿಳಿಸಿದರು.

ರಂಜನಾ ಎಸ್ ಶೆಟ್ಟಿ ವಿದ್ಯಾರ್ಥಿಗಳಿಗೆ ನೀಡಿದ ಸುಲಭ ಇಂಗ್ಲೀಷ್ ಪುಸ್ತಕವನ್ನು  ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಬಿಲ್ಲಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಸ್ಥಳೀಯ ಉದ್ಯಮಿ ಪ್ರಥ್ವಿರಾಜ್ ಶೆಟ್ಟಿ,ಆದರ್ಶ ಹೆಗ್ಡೆ, ಸಾಫಲ್ಯ ಟ್ರಸ್ಟ್ ನ ಕಾರ್ಯದರ್ಶಿ ಇಂದೂ ಆರ್ ಭಟ್, ಖಜಾಂಜಿ ಮಮತಾ ಶೆಟ್ಟಿ, ಪಿ ಅರ್ ಒ ಅನುರಿತಾ ಶೆಟ್ಟಿ,ನಿವೃತ್ತ ಪ್ರಾಂಶುಪಾಲೆ ತಾರಾದೇವಿ ಹೆಚ್ ಹಾಗೂ ಟ್ರಸ್ಟಿನ ಸದಸ್ಯರು ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ರಾಮಕೃಷ್ಣ ನಾಯಕ್ ಸ್ವಾಗತಿಸಿದರು.ಸಹ ಶಿಕ್ಷಕರಾದ ನಾಗರತ್ನ ವಂದಿಸಿ, ಅಶೋಕ್ ಕಾರ್ಯಕ್ರಮ ನಿರೂಪಿಸಿದರು.

 

 
 
 
 
 
 
 
 
 
 
 

Leave a Reply