ಗುಂಡಿಬೈಲು ವಾರ್ಡ್ ಕಳೆ ತೆಗೆಯುವ ಅಭಿಯಾನದಲ್ಲಿ ಉಡುಪಿ ಇನ್ನರ್ ವೀಲ್ ಕ್ಲಬ್ ಬಾಗಿ 

ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ ಹಡಿಲು ಭೂಮಿ ಕೃಷಿ ಅಂದೋಲನ “ದಡಿ  ಕೇದಾರೋತ್ಥಾನ ಟ್ರಸ್ಟ್ ಮೂಲಕ ಹಡಿಲು ಭೂಮಿ ಕೃಷಿ ಮಾಡಲಾಗಿದ್ದು, ನಾಟಿ ಮಾಡಿದ ಗದ್ದೆಗಳಲ್ಲಿ ಪೈರಿನ ನಡುವೆ ಬೆಳೆದ ಕಳೆಗಳನ್ನು ತೆಗೆಯುವ ಅಭಿಯಾನ ಭಾನುವಾರ ಗುಂಡಿಬೈಲು ವಾರ್ಡಿನಲ್ಲಿ ನಡೆಯುತ್ತಿದ್ದು ಈ ಕಾರ್ಯದಲ್ಲಿ ಉಡುಪಿ ಇನ್ನರ್ ವೀಲ್ ಕ್ಲಬ್ ಕೈ ಜೋಡಿಸಿತ್ತು.  
ಶಾಸಕ ಶ್ರೀ ಕೆ. ರಘುಪತಿ ಭಟ್ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಸೇವಾ ಮನೋಭಾವದಿಂದ ಈ ಕಾರ್ಯದಲ್ಲಿ ಪಾಲ್ಗೊಂಡಿರುವ ಸರ್ವರಿಗೂ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಕೃತಜ್ಞತೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಸದಸ್ಯರಾದ ಪ್ರಭಾಕರ್ ಪೂಜಾರಿ, ಮಾನಸ ಸಿ ಪೈ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶುಭಾ ಎಸ ಬಾಸ್ರಿ, ಕಾರ್ಯದರ್ಶಿ ಶಾಲಿನಿ ರಾಘವೇಂದ್ರ, ಶೈಲಾ ಆರ್ ಮಯ್ಯ  ವನಿತಾ ಉಪಾಧ್ಯ, ಪ್ರೇಮಾ ಹಾಗು ಸ್ಥಳೀಯ ಕೃಷಿಕರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply