ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಜಯಕರ ಶೆಟ್ಟಿಯವರು ಒಬ್ಬರ ನೋವಿಗೆ ಇನ್ನೊಬ್ಬರು ಸ್ಪಂದಿಸುವ ಗುಣವನ್ನು ಕೇವಲ ಮನುಷ್ಯರಿಗೆ ಮಾತ್ರ ದೇವರು ನೀಡಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ಕೈಲಾದ ಸೇವೆಯನ್ನು ಸಮಾಜದಲ್ಲಿರುವ ಅರ್ಹರಿಗೆ ಮಾಡಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದರು.
ಪತ್ರಕತ್ರ ಶ್ರೀಕಾಂತ್ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ತುಳುಕೂಟದ ಕಾರ್ಯದರ್ಶಿ ಗಂಗಾಧರ್ ಕಿದಿಯೂರು, ಕೋಶಾಧಿಕಾರಿ ಚೈತನ್ಯ, ಹಿರಿಯ ನ್ಯಾಯವಾದಿ ಶಾಂತರಾಮ ಶೆಟ್ಟಿ, ಲಯನ್ಸ್ ಗವರ್ನರ್ ವಿಶ್ವನಾಥ್ ಶೆಟ್ಟಿ, ತುಳು ಅಕಾಡೆಮಿಯ ಸದಸ್ಯೆ ತಾರಾ ಆಚಾರ್ಯ, ಸಂಧ್ಯಾ ಶೆಣೈ , ಸಂಧ್ಯಾ ಮಲಬಾರ್ ಗೋಲ್ಡ್ ನ ಹಫೀಜ್ ರೆಹೆಮಾನ್, ತೋನ್ಸೆ ಮನೋಹರ್ ಶೆಟ್ಟಿ ಉಪಸ್ಥಿತರಿದ್ದರು.
ತುಳು ಕೂಟದ ಉಪಾಧ್ಯಕ್ಷ ಮುಹ್ಮಮದ್ ಮೌಲಾ ಸ್ವಾಗತಿಸಿ, ಪ್ರಸ್ತಾವನೆಗೈದರು. ಯಶೋದಾ ಕೇಶವ್ ಪ್ರಾರ್ಥಿಸಿದರು, ರತ್ನಾಕರ್ ಇಂದ್ರಾಳಿ ನಿರೂಪಿಸಿದರು.