ಕಲಾವಿದನ ಮರಣಕ್ಕೆ ಕಂಬನಿ ಮಿಡಿದ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ

ಹೆಸರಾಂತ ಸಮಾಜ ಸೇವಕ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ (68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ (58) ಗಂಡ ಹೆಂಡತಿ ಜೊತೆಯಾಗಿ ಜೀವನ ನಡೆಸಿ ಜೊತೆಯಾಗಿ ಇಹಲೋಕ ತ್ಯಜಿಸಿದ ಆಘಾತಕಾರಿ ಘಟನೆ ನಿನ್ನೆ ನಡೆದಿದೆ.

ಸರಳ ಸಜ್ಜನ ವ್ಯಕ್ತಿ, ಅಶಕ್ತರ ಸಹಾಯಕ್ಕೆ ಧಾವಿಸುವ ಅವರು ಯಾವಾಗಲೂ ಸಮಾಜದ ಪರವಾಗಿ ಕಾಳಜಿ ಹೊಂದಿದ್ದರು.

ಉಡುಪಿ ಮಂಗಳೂರು ಭಾಗದಲ್ಲಿ ಸಾವಿರಾರು ನಾಟಕ ಕಲಾವಿದರನ್ನು ಸಮಾಜಕ್ಕೆ ನೀಡಿದ ಕೀರ್ತಿ ಲೀಲಾಧಾರ ಶೆಟ್ಟಿ ಅವರಿಗೆ ಸಲ್ಲುತ್ತದೆ.

 ಇಂತಹ ಮಹಾನ್ ರಂಗ ಕಲಾವಿದನನ್ನು ಕಳೆದುಕೊಂಡ ರಂಗಭೂಮಿ ನಿಜಕ್ಕೂ ಬಡವಾಗಿದೆ, ಅವರ ಅಭಿಮಾನಿಗಳು ನಿಜಕ್ಕೂ ಶೋಕಸಾಗರದಲ್ಲಿ ಮುಳುಗಿದ್ದಾರೆ.

ಮೃತರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬಕ್ಕೂ, ಅಭಿಮಾನಿ ಬಳಗಕ್ಕೂ ದೇವರು ನೀಡಲಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆಯ ಪ್ರವೀಣ್ ಕುಮಾರ್ ಶೆಟ್ಟಿ ಬಣದ ನೂರಾರು ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ.

 
 
 
 
 
 
 
 
 
 
 

Leave a Reply