ಬ್ರಹ್ಮಾವರ ತಾಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಅನಾವರಣ

ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ತಾಲೂಕು ಘಟಕದ ಆಶ್ರಯದಲ್ಲಿ ಮಾರ್ಚ್ 4ರಂದು ಬ್ರಹ್ಮಾವರ ತಾಲ್ಲೂಕು ಮೂರನೇ ತಾಲೂಕು ಸಾಹಿತ್ಯ ಸಮ್ಮೇಳನವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚೆರ್ಕಾಡಿ ಪೇತ್ರಿಯಲ್ಲಿ ಇತಿಹಾಸ ಸಂಶೋಧಕ ಡಾ|ಜಗದೀಶ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು,ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸಾಹಿತಿ ಸಜಂಗದ್ದೆ ರಾಮ ಭಟ್ಟ,ಕಚ್ಚೂರು ಮಾಲ್ತಿದೇವಿ ದೇವಸ್ಥಾನ ಧರ್ಮದರ್ಶಿ ಗೋಕುಲ್ ದಾಸ್ ಬಾರಕೂರು ಇವರು ಬಾರಕೂರು ಕಲ್ಚಪ್ರದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಕಾರ್ಯದರ್ಶಿಗಳಾದ ನರೇಂದ್ರ ಕುಮಾರ್ ಕೋಟ,ಸಂಘಟನಾ ಕಾರ್ಯದರ್ಶಿ ಸತೀಶ್ ವಡ್ಡರ್ಸೆ,ಕೋಶಧಿಕಾರಿ ಮನೋಹರ್ ಪಿ
ಬ್ರಹ್ಮಾವರ ತಾಲೂಕು ಕಸಾಪ ಅಧ್ಯಕ್ಷರಾದ ರಾಮಚಂದ್ರ ಐತಾಳ್, ಕೋಟ ಹೋಬಳಿ ಕಸಾಪ ಅಧ್ಯಕ್ಷರಾದ ಅಚ್ಯುತ ಪೂಜಾರಿ, ಬ್ರಹ್ಮಾವರ ಹೋಬಳಿ ಘಟಕದ ಕೋಶಾಧಿಕಾರಿ ವಿಶ್ವನಾಥ್ ಖಾರ್ವಿ,ಸ. ಹಿ . ಪ್ರಾ. ಶಾಲೆ ಚೆರ್ಕಾಡಿ -ಪೇತ್ರಿ ಇಲ್ಲಿಯ ಮುಖ್ಯ ಶಿಕ್ಷಕಿ ಶ್ರೀಮತಿ ಶೀಲಾ. ಸಮೃದ್ಧಿ ಮಹಿಳಾ ಮಂಡಳಿ.ರಿ.ಚೆರ್ಕಾಡಿ ಇದರ ಅಧ್ಯಕ್ಷೆ ಶ್ರೀಮತಿ ಪ್ರಸನ್ನ ಪ್ರಸಾದ್ ಭಟ್,ಶಿವಾನಿ ವಿಪ್ರ ಮಹಿಳಾ ಮಂಡಳಿ. ರಿ.ಸೂರಾಲು ವಲಯದ ಅಧ್ಯಕ್ಷೆ ಶ್ರೀಮತಿ ಅಮಿತಾ ಕ್ರಮಧಾರಿ,ಸ್ಥಳೀಯರಾದ ಸತೀಶ್ ಪೂಜಾರಿ ಉಪಸ್ಥಿತರಿದ್ದರು. ಬ್ರಹ್ಮಾವರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಕೋಶಾಧಿಕಾರಿ ಅಲ್ತಾರು ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು

 
 
 
 
 
 
 
 
 
 
 

Leave a Reply