ಗುಡಿಸಲು ಮನೆಗಳಿಗೆ ವಿದ್ಯುತ್ ಲೈಟ್ ಅನುಮತಿ ಸಿಗುವುದಿಲ್ಲ, ಈ ಮನೆಯಲ್ಲಿ ಶಾಲೆಗೆ ಹೋಗುವ ವಿದ್ಯಾರ್ಥಿಗಳು ಮತ್ತು ಹಿರಿಯರು ಇರುವುದರಿಂದ ಲೈಟಿನ ಅವಶ್ಯಕತೆ ಇದ್ದುದರಿಂದ ದಾನಿಗಳ ಸಹಾಯದಿಂದ ಸೋಲಾರ್ ಲೈಟ್ ವ್ಯವಸ್ಥೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಶಿವಾಜಿಪಾರ್ಕ್ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಸುರೇಶ್, ಮಹಿಳಾ ಮಂಡಳಿ ಅಧ್ಯಕ್ಷೆ ಪ್ರೇಮಾ, ನಾರಾಯಣ ಬಲ್ಲಾಳ್, ಸಮಿತಿ ಅಧ್ಯಕ್ಷ ಪ್ರಭಾತ್ ಕೊಡವೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾ ಅಭಿವೃದ್ಧಿ ಯೋಜನೆಯ ಹಾಗೂ ವಲಯದ ಮೇಲ್ವಿಚಾರಕರಾದ ವಸಂತ ದೇವಾಡಿಗ, ಗೆಳೆಯರ ಬಳಗದ ಅಧ್ಯಕ್ಷರಾದ ಅಮಿತ್ ಗರ್ಡೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಪ್ರತೀಶ್ ರವರು ಸ್ವಾಗತಿಸಿ, ಧನ್ಯವಾದವಿತ್ತರು