ಯುವ ವಿಚಾರ ವೇದಿಕೆಯ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ

ಯುವ ವಿಚಾರ ವೇದಿಕೆ (ರಿ.) ಕೊಳಲಗಿರಿ, ಗ್ರಾಮ ಪಂಚಾಯತ್ ಉಪ್ಪೂರು, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ: 09/07/2023, ಆದಿತ್ಯವಾರ ವೇದಿಕೆಯ ವಠಾರದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು.
ಔಷಧೀಯ, ಹಣ್ಣು ಹಾಗೂ ಇನ್ನಿತರ ಸುಮಾರು 100 ಗಿಡಗಳನ್ನು ವೇದಿಕೆಯ ವಠಾರದಲ್ಲಿ ಹಾಗೂ ಸದಸ್ಯರ ಮನೆಗಳಲ್ಲಿ ನೆಡಲಾಯಿತು.
ಕೇವಲ ಗಿಡಗಳನ್ನು ನೆಡುವುದು ಮಾತ್ರವಲ್ಲದೆ ಅವುಗಳ ರಕ್ಷಣೆ ಹಾಗೂ ಪೋಷಣೆ ಕೂಡ ಪ್ರತಿಯೊಬ್ಬರ ಕರ್ತವ್ಯ ಹಾಗೂ ಜವಾಬ್ಧಾರಿ. ಗಿಡ ಮರಗಳಿಂದ ಭೂಮಿ , ಜೀವಜಲ ಹಾಗೂ ಪರಿಸರ ಸಂರಕ್ಷಣೆ ಆಗುವುದರಿಂದ ಗಿಡಮರಗಳನ್ನು ನೆಟ್ಟು ಬೆಳೆಸುವ ಅಗತ್ಯತೆ ಹಾಗೂ ಅನಿವಾರ್ಯತೆ ಪ್ರಸ್ತುತ ಇದೆ ಎನ್ನುವ ಅಭಿಪ್ರಾಯ ಸರ್ವರಲ್ಲು ವ್ಯಕ್ತವಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮಹೇಶ್ ಕೋಟ್ಯಾನ್, ಸುವರ್ಣ ಎಂಟರ್ಪ್ರೈಸಸ್ ಮಾಲಕರೂ ಹಾಗೂ ಜಯಂಟ್ಸ್ ಗ್ರೂಪ್ ನ ಮಾಜಿ ರಾಜ್ಯಾಧ್ಯಕ್ಷ ಶ್ರೀ ಮಧುಸೂಧನ್ ಹೇರೂರು, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ದ ಮಾಜಿ ಅಧ್ಯಕ್ಷರು ಶ್ರೀ ಸುಂದರ ಪೂಜಾರಿ ಮುಡುಕುಕ್ಕುಡೆ, ಪುಷ್ಪಲತಾ ನರ್ಸರಿ ಯ ಶ್ರೀ ಕೇಶವ ಹಾಗೂ ವೇದಿಕೆಯ ಅಧ್ಯಕ್ಷರಾದ ಶ್ರೀ ದಿನೇಶ್ ಶೆಟ್ಟಿ ಉಪಸ್ಥಿತರಿದ್ದು ಗಿಡ ನೆಟ್ಟು ಶುಭ ಹಾರೈಸಿದರು.
ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಹಾಗೂ ಗ್ರಾಮ ಪಂಚಾಯತ್ ಉಪ್ಪೂರು ಇವರು ನೀಡಿದ ಗಿಡಗಳನ್ನು ನೆಟ್ಟು ರಕ್ಷಣೆ ಹಾಗೂ ಪೋಷಣೆ ಮಾಡುವ ಸಂಕಲ್ಪ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸ್ಥಳೀಯರು, ವೇದಿಕೆಯ ಸದಸ್ಯರು ಭಾಗವಹಿಸಿದ್ದರು. ವೇದಿಕೆಯ ಸುಬ್ರಮಣ್ಯ ಆಚಾರ್ಯ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
 
 
 
 
 
 
 
 
 
 
 

Leave a Reply