ಇಂದ್ರಾಳಿ ಲಯನ್ಸ್ ಕ್ಲಬ್ ವತಿಯಿಂದ ಆಹಾರ ಕಿಟ್, ಮಾಸ್ಕ್, ಸ್ಯಾನಿಟೈಸರ್ ಕೊಡುಗೆ 

ಕೋವಿಡ್ ನಿಂದಾಗಿ ಜನಸಾಮಾನ್ಯರು ಶ್ರೀಮಂತರು ಬಹಳಷ್ಟು ಪಾಠಗಳನ್ನು ಕಲಿತಿದ್ದಾರೆ ಜನರು ಒಬ್ಬರಿಗೊಬ್ಬರು ಸಹಾಯ ಮಾಡಿಕೊಂಡು ಬದುಕುವ ರೀತಿಯನ್ನು ಬಳಸಿಕೊಂಡಿದ್ದಾರೆ ಎಂದು ಉಡುಪಿ ಜಿಲ್ಲಾ ಅಪಾರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ. 
ಉಡುಪಿ ಇಂದ್ರಾಳಿ ಲಯನ್ಸ್ ಕ್ಲಬ್ ಸುಮಾರು ಮೂರುವರೆ ಲಕ್ಷದ ಆಹಾರ ಕಿಟ್ ಮಾಸ್ಕ್ ಸ್ಯಾನಿಟೈಸರ್ ಮುಂತಾದ ವಸ್ತುಗಳನ್ನು ಅಗತ್ಯವುಳ್ಳವರಿಗೆ ನೀಡುವ ಯೋಜನೆ ಅತ್ಯಂತ  ಶ್ಲಾಘನೀಯ ಎಂದರು.  ಉಡುಪಿ ಟೌನ್ ಹಾಲಿನಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆ ಪೌರಾಯುಕ್ತ ಉದಯ ಕುಮಾರ್ ಶೆಟ್ಟಿ,  ದಕ್ಷಿಣ ಕನ್ನಡ-ಉಡುಪಿ ಮೀನುಗಾರರ ಫೆಡರೇಷನ್ ಅಧ್ಯಕ್ಷ  ಯಶಪಾಲ್ ಸುವರ್ಣ, 
ಲಯನ್ಸ್  ಜಿಲ್ಲಾ ಗವರ್ನರ್ ವಿಶ್ವನಾಥ್ ಶೆಟ್ಟಿ 
 ಜಯಕರ್ ಶೆಟ್ಟಿ ಇಂದ್ರಾಳಿ, ಮನೋಹರ್ ಶೆಟ್ಟಿ ತೋನ್ಸೆ, ಚಂದ್ರಶೇಖರ್ ರಾವ್ ಕಾರ್ಯದರ್ಶಿ ಉಪಸ್ಥಿತರಿದ್ದರು.  ರತ್ನಾಕರ್ ಇಂದ್ರಾಳಿ ನಿರೂಪಿಸಿ, ಸ್ವಾಗತಿಸಿದರು
 
 
 
 
 
 
 
 
 
 
 

Leave a Reply