ಕನ್ನಡ ಚಿತ್ರನಟ ಚೇತನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರವರಿಗೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ದೂರು

ಚೇತನ್ ಎಂಬ ವಿಕೃತ ಮನಸ್ಸಿನ ಕನ್ನಡ ಚಿತ್ರನಟ ಇತ್ತೀಚೆಗೆ ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ಬ್ರಾಹ್ಮಣರನ್ನು ಉಗ್ರವಾದಿಗಳು ಹಾಗೂ ಬ್ರಾಹ್ಮಣ್ಯ ನಾಶವಾಗಬೇಕು ಎಂದು ಹುಚ್ಚುಚ್ಚಾಗಿ ಬ್ರಾಹ್ಮಣರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 
ಈ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗಿ  ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರವರಿಗೆ ದೂರು ನೀಡಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಪೊಲೀಸ್ ಆಯುಕ್ತರು ಕೂಡಲೇ ಅವನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ಮಾಡಿದ್ದಾರೆ. 
ಹಾಗೂ ನಟ ಚೇತನ್ ಬ್ರಾಹ್ಮಣ ಸಮುದಾಯದವರಿಗೆ ಬೇಷರತ್ತಾಗಿ ಕ್ಷಮೆ ಯಾಚಿಸಬೇಕೆಂದು ಆಗ್ರಹ ಮಾಡುತ್ತೇವೆ.  ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಕರ್ನಾಟಕ ಸರಕಾರ, ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದಮೂರ್ತಿ, ನಿರ್ದೇಶಕರಾದ ವೇ.ಬ್ರ ಡಾ॥ಭಾನುಪ್ರಕಾಶ್ ಶರ್ಮಾ, ಶ್ರೀ ಸುಬ್ರಾಯ ಹೆಗಡೆ, ಶ್ರೀ ವಿ.ಪವನ್ ಕುಮಾರ್ ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply