ನಂದಳಿಕೆ : ಭಗತ್ ಸಿಂಗ್ ಜನ್ಮ ದಿನಾಚರಣೆ

ಬೆಳ್ಮಣ್: ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಉಡುಪಿ ಇದರ ಸಹಯೋಗದಲ್ಲಿ ಸೋಮವಾರ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ಬಿನ ಸಭಾಂಗಣದಲ್ಲಿ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.

ನಂದಳಿಕೆ ಅಬ್ಬನಡ್ಕ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಬೋಳ ಉದಯ್ ಅಂಚನ್ ಭಗತ್ ಸಿಂಗ್ ರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿ ಮಾತನಾಡಿ, ಭಾರತದ ಸ್ವಾತಂತ್ರ್ಯಕ್ಕಾಗಿ ಸಣ್ಣ ವಯಸ್ಸಿನಲ್ಲಿಯೇ ನೇಣುಗಂಬಕ್ಕೆ ಏರಿದವರು ಭಗತ್‌ ಸಿಂಗ್‌. ಬಡವರು, ಶ್ರೀಮಂತರ ನಡುವಿನ ಕಂದಕ ಬದಲಾಗಲು ಪುರಾತನ ಅಸಮಾನತೆಯ ವ್ಯವಸ್ಥೆಯನ್ನು ಹೋಗಲಾಡಿಸಲು ಅನೇಕ ಬದಲಾವಣೆ ಅಗತ್ಯ ಎಂದು ಸಾರಿ ಹೇಳಿದವರು ಭಗತ್ ಸಿಂಗ್. ಅವರ ಜೀವನ ರಾಷ್ಟ್ರನಿರ್ಮಾಣಕ್ಕೆ ಪ್ರೇರಣೆ ಎಂದು ಹೇಳಿದರು.

ಸಂಘದ ಸಂಚಾಲಕ ಅಬ್ಬನಡ್ಕ ಸಂದೀಪ್ ಪೂಜಾರಿ, ಪೂರ್ವಾಧ್ಯಕ್ಷ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಸತೀಶ್ ಪೂಜಾರಿ, ಕಾರ್ಯದರ್ಶಿ ಹರಿಪ್ರಸಾದ್ ಆಚಾರ್ಯ, ಸದಸ್ಯ ಸುರೇಶ್ ಅಬ್ಬನಡ್ಕ ಮೊದಲಾದವರಿದ್ದರು. 

 
 
 
 
 
 
 
 
 
 
 

Leave a Reply