ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ ಗುಣ, ಸೇವಾ ಮನೋಭಾವ ರೂಪಿಸುವ ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ ರಾಷ್ಟ್ರೀಯ ಸೇವಾ ಯೋಜನ ವತಿಯಿಂದ ದಿನಾಂಕ 3 ಜುಲೈ ರವಿವಾರದಂದು ಚೈತನ್ಯಾ ಚಾರಿಟೇಬಲ್ ಟ್ರಸ್ಟ್ ಸ್ಪಂದನ ನೇಜರನಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀಮತಿ ಅನುಪಮಾ ಜೋಗಿರವರ ಮುಂದಾಳತ್ವದ ಸ್ವಚ್ಛತಾ ಕಾರ್ಯಕ್ರಮದಲ್ಲಿ 80 ವಿದ್ಯಾರ್ಥಿಗಳ ತಂಡವು 5 ಗುಂಪುಗಳಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದರು. ರಾಷ್ಟ್ರೀಯ ಸೇವಾ ಯೋಜನಾ ಘೋಷಣಾ ವಾಕ್ಯ ನನಗಲ್ಲ ನಿನಗೆ ಎಂಬಂತೆ ವಿದ್ಯಾರ್ಥಿಗಳು ಸ್ಪಂದನ ಪರಿಸರದಲ್ಲಿರುವ ಹುಲ್ಲುಗಳನ್ನು, ಕಸ ಕಡ್ಡಿಗಳನ್ನು ತೆಗೆದು ಸಸಿಗಳನ್ನು ನೆಟ್ಟು, ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಚೈತನ್ಯಾ ಚಾರಿಟೇಬಲ್ ಟ್ರಸ್ಟ್ ಸ್ಪಂದನದ ಅಧ್ಯಕ್ಷರಾದ ಶ್ರೀ ಉಮೇಶ್ ರವರು ವಿದ್ಯಾರ್ಥಿಗಳ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಶ್ರೀಮತಿ ಅನುಪಮಾ ಜೋಗಿ ಹಾಗೂ ಶ್ರೀ ಮೆಲ್ಸನ್ ಡಿಸೋಜ ಉಪಸ್ಥಿತರಿದ್ದರು.