ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಜಿ ತಿಮ್ಮ ಪೂಜಾರಿಯವರಿಗೆ ಪಂಚವರ್ಣ ರಜತ ಗೌರವಾರ್ಪಣೆ

ಕೋಟ ಸಹಕಾರಿ ವ್ಯಾವಸಾಯಿಕ ಸಂಘದ ಪ್ರಧಾನ ಕಚೇರಿಯಲ್ಲಿ ನೂತನವಾಗಿ
ನಿರ್ಮಾಣಗೊಂಡ ನೂತನ ಸಭಾಭವನ, ಗೋದಾಮು ಮತ್ತು ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಮಹಿಳಾ ಘಟಕದ ವತಿಯಿಂದ ಸಹಕಾರ ಕ್ಷೇತ್ರದ ಸಾಧನೆಗಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಜಿ.ತಿಮ್ಮ ಪೂಜಾರಿ ಇವರಿಗೆ ಪಂಚವರ್ಣ ರಜತ ಗೌರವಾರ್ಪಣೆ ನೀಡಿ ಗೌರವಿಸಲಾಯಿತು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪಂಚವರ್ಣ ಯುವಕ ಮಂಡಳದ ಅಧ್ಯಕ್ಷ ಅಜಿತ್ ಆಚಾರ್ಯ,ಸ್ಥಾಪಕಾಧ್ಯಕ್ಷ ಸುರೇಶ್
ಗಾಣಿಗ,ಸ್ಥಾಪಕ ಸದಸ್ಯ ನರಸಿಂಹ ಗಾಣಿಗ,ಗೌರವ ಸಲಹೆಗಾರ ಚಂದ್ರ ಆಚಾರ್ಯ,ಸಂಘಟನಾಕಾರ್ಯದರ್ಶಿ ಗಿರೀಶ್ ಅಚಾರ್ಯ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್,ಗೌರವಾಧ್ಯಕ್ಷೆ ಕುಸುಮಾ ದೇವಾಡಿಗ,ಸುಜಾತ ಬಾಯರಿ,ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ತಾರಾನಾಥ ಹೊಳ್ಳ, ಸಮಾಜಸೇವಕ ಬಡಾಮನೆ ರತ್ನಾಕರ ಶೆಟ್ಟಿ ಈ ಸಂದರ್ಭ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್
ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ದ.ಕ. ಜಿ . ಕೇಂದ್ರ ಸ. ಬ್ಯಾಂಕ್ ನಿರ್ದೇಶಕ ಡಾ| ದೇವಿಪ್ರಸಾದ್ ಶೆಟ್ಟಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್
ಕುಮಾರ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply