ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ (ರಿ.) ಗಂಗೊಳ್ಳಿ ವತಿಯಿಂದ ಭಾರತದ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದೆ.
2021- 22 ನೇ ಶೈಕ್ಷಣಿಕ ಸಾಲಿನಲ್ಲಿ 8, 9 ಮತ್ತು 10ನೇ ತರಗತಿಯಲ್ಲಿ ಕಲಿಯುತ್ತಿರುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದಾಗಿದೆ.
ಪ್ರಬಂಧದ ವಿಷಯ- ದೇಶಪ್ರೇಮ ಎಂದರೆ? ಆಸಕ್ತಿ ಉಳ್ಳವರು ಪ್ರಬಂಧವನ್ನು ಎ ೪ ಅಳತೆಯ ಕಾಗದದಲ್ಲಿ ಮೂರು ಪುಟಗಳಿಗೆ ಮೀರದಂತೆ ಸ್ವಹಸ್ತಾಕ್ಷರದಲ್ಲಿ ಕನ್ನಡದಲ್ಲಿ ಬರೆಯಬೇಕು.
ಸ್ಪರ್ಧಿಗಳು ಕೊನೆಯ ಪುಟದಲ್ಲಿ ತಮ್ಮ ಪೂರ್ಣ ಹೆಸರು, ಊರು, ಮೊಬೈಲ್ ಸಂಖ್ಯೆ ಮತ್ತು ತಾವು ಕಲಿಯುತ್ತಿರುವ ಶಾಲೆಯ ವಿಳಾಸ ಹಾಗೂ ಮುಖ್ಯೋಪಾಧ್ಯಾಯರ ಸಂಪರ್ಕ ಸಂಖ್ಯೆಯನ್ನು ಕಡ್ಡಾಯವಾಗಿ ಬರೆಯಬೇಕು.