ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ವೃತ್ತ ನಿರ್ಮಾಣಕ್ಕೆ ಮನವಿ

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಒಂದು ವೃತ್ತಕ್ಕೆ ದೇಶ ಭಕ್ತ, ಸ್ವಾತಂತ್ರ್ಯ ಹೋರಾಟ ಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹೆಸರನ್ನು ನಾಮಕರಣ ಹಾಗು ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿರ್ಮಿಸಿ, ಅನಾವರಣ ಗೊಳಿಸುವ ಬಗ್ಗೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಹಾಗು ಪೌರಾಯುಕ್ತ ಆನಂದ ಸಿ. ಕಲ್ಲೋಳಿಕರ್ ರವರಿಗೆ ಕ್ರಾಂತೀ ವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ(ರಿ. ) ಕರ್ನಾಟಕ, ಇದರ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಉಪಾಧ್ಯಕ್ಷ ಈರಪ್ಪ ಗೌಂಡಿ, ಮಹಿಳಾ ವಿಭಾಗದ ಅಧ್ಯಕ್ಷೆ ಸವಿತಾ ನೋಟಗಾರ್, ಗೌರವ ಸಲಹೆಗಾರ ಜನಾರ್ದನ್ ಕೊಡವೂರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply