ಉಡುಪಿ: ಭಾರತೀಯ ರೆಡ್ ಕ್ರಾಸ್, ಉಡುಪಿ ಇವರ ವತಿಯಿಂದ ಉಡುಪಿಯ ರೆಡ್ ಕ್ರಾಸ್ ಭವನದಲ್ಲಿ ಪ್ರಾಕೃತಿಕ ವಿಕೋಪದ ಸಂತಸ್ತರಿಗೆ ಉಪಯುಕ್ತವಾದ ಕಿಟ್ ಗಳನ್ನು ವಿತರಿಸಲಾಯಿತು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ, ಉಪಸಭಾಪತಿ ಡಾ. ಅಶೋಕ ಕುಮಾರ್ ವೈ. ಜಿ. ಗೌರವ ಕಾರ್ಯದರ್ಶಿ ಕೆ. ಜಯರಾಮ ಆಚಾರ್ಯ ಸಾಲಿಗ್ರಾಮ, ಖಜಾಂಜಿ ಡಾ. ಅರವಿಂದ ನಾಯಕ್ ಅಮ್ಮುಂಜೆ, ಪೂರ್ವ ಸಭಾಪತಿ ಡಾ. ಉಮೇಶ್ ಪ್ರಭು ಡಿ.ಡಿ.ಆರ್. ಸಿ. ಕಾರ್ಯದರ್ಶಿ ಕೆ. ಸನ್ಮತ್ ಹೆಗ್ಡೆ, ಶ್ರೀಮತಿ ರಮಾದೇವಿ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.