ಯಕ್ಷಗಾನ ಕಲಾರಂಗದ ವತಿಯಿಂದ ಪ್ರೊ. ಆರ್. ಎಲ್. ಭಟ್ ಗೆ ಗೌರವಾರ್ಪಣೆ

ಉಡುಪಿ : ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಭೌತಶಾಸ್ತ್ರಉಪನ್ಯಾಸಕರು, ಹಿರಿಯ ರಂಗ ನಿರ್ದೇಶಕರೂ ಆದ ಪ್ರೊ. ಆರ್. ಎಲ್. ಭಟ್ ರನ್ನು ಸ್ವಗೃಹದಲ್ಲಿ ಯಕ್ಷಗಾನ ಕಲಾರಂಗದ ವತಿಯಿಂದ ಇಂದು ಗೌರವಿಸಲಾಯಿತು. ಅವರ ಧರ್ಮಪತ್ನಿ ಸಂಗೀತ ವಿ.ವಾರಿಜಾಕ್ಷಿ ಆರ್.ಎಲ್. ಭಟ್ ಉಪಸ್ಥಿತರಿದ್ದರು. 

ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್ ಸ್ಮರಣಿಕೆ ನೀಡಿ ಗೌರವಿಸಿ ಆರ್. ಎಲ್. ಭಟ್ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡುವ ವಿದ್ಯಾಪೋಷಕ್ ಗೆ ತನ್ನ ಎಪ್ಪತ್ತೇಳನೇ ಹುಟ್ಟುಹಬ್ಬದ ಸಂದರ್ಭದಲ್ಲಿ ರೂಪಾಯಿ 77 ಸಾವಿರ ನೀಡಿ ಪ್ರೋತ್ಸಾಹಿಸಿದ್ದನ್ನು ಕೃತಜ್ಞತೆಯಿಂದ ಸ್ಮರಿಸಿಕೊಂಡರು. 

ಕಲಾರಂಗದ ಉಪಾಧ್ಯಕ್ಷ ಎಸ್. ವಿ. ಭಟ್, ಕಾರ್ಯದರ್ಶಿ ಮುರಲಿ ಕಡೆಕಾರ್, ವಿದ್ಯಾಪೋಷಕ್ ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್, ಜತೆ ಕಾರ್ಯದರ್ಶಿ ಪ್ರೊ. ನಾರಾಯಣ ಎಂ. ಹೆಗಡೆ ಸದಸ್ಯ ಎಚ್. ಎನ್. ವೆಂಕಟೇಶ್ ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply