15 ದಿನಗಳ ಹೊಲಿಗೆ ತರಬೇತಿ ಶಿಬಿರ ಸಮಾರೋಪ

ಭಗಿನಿ ಮಹಿಳಾ ಮಂಡಳಿ ಪರ್ಕಳ, ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ , ರೋಟರಿ ಐಸಿರಿ ಪರ್ಕಳ, ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘ ಪರ್ಕಳ ಇವರೆಲ್ಲರ ಜಂಟಿ ಆಶ್ರಯದಲ್ಲಿ 15 ದಿನಗಳ ಹೊಲಿಗೆ  ತರಬೇತಿ ಶಿಬಿರದ ಸಮಾರೋಪ ಸಮಾರಂಭ ಗುರುವಾರ ಪರ್ಕಳದಲ್ಲಿ ಆಯೋಜಿಸಲಾಯಿತು. ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ರೋಟರಿಯ ಸಹಾಯಕ ಗವರ್ನರ್ ರಾಮಚಂದ್ರ ಉಪಾಧ್ಯ, ಚಿಟ್ಪಾಡಿಯ ಇಂಜಿನಿಯರ್ ಉಷಾ ಆರ್ ಬೇಕಲ್, ಭಾರತೀಯ ವಿಕಾಸ್ ಟ್ರಸ್ಟ್ ನ ಪ್ರಧಾನ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮಿ ಬಾಯಿ, ಕಾರ್ಯಕ್ರಮ ನಿರ್ವಹಣಾಧಿಕಾರಿ ಪ್ರತಿಮಾ, ರೋಟರಿ ವಲಯ ಸೇನಾನಿ ಗೀತಾಶ್ರೀ ಎಂ ಉಪಾಧ್ಯ, ಐಸಿರಿ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿ, ಹೆರ್ಗ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ದಿನಕರ್ ಶೆಟ್ಟಿ ಹೆರ್ಗ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply