ಬಳಿಕ ಶ್ರೀ ಕಾಮಾಕ್ಷಿ ದೇವಸ್ಥಾನದಲ್ಲಿ ಜಿಲ್ಲಾ ಗವರ್ನರ್ ದಂಪತಿಗಳಿಂದ ತ್ರಿಕಾಲ ಪೂಜೆಯನ್ನು ಮಾಡಿಸಲಾಯಿತು. ಮತ್ತು ಅವರಿಗೆ ಕಾಮಾಕ್ಷಿ ದೇವರ ಸಮ್ಮುಖದಲ್ಲಿ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಗವರ್ನರ್ ಅವರು ರೋಟರಿ ಕ್ಲಬ್ ಉಡುಪಿ ರಾಯಲ್ ಸಮಾಜಕ್ಕಾಗಿ ಮಾಡುತ್ತಿರುವ ಒಳ್ಳೆಯ ಕೆಲಸಗಳನ್ನು ಶ್ಲಾಘಿಸಿದರು ಮತ್ತು ಇನ್ನೂ ಹೆಚ್ಚು ಸದಸ್ಯರನ್ನು ಸೇರಿಸಿಕೊಂಡು ಈ ಕ್ಲಬ್ ಇನ್ನೂ ಉತ್ತಮವಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.
ದೇವರ ಸ್ವಾದಿಷ್ಟ ಭೋಜನ ಪ್ರಸಾದ ಆಸ್ವಾದಿಸುವುದರೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು. ರೋಟರಿ ಕ್ಲಬ್ ಉಡುಪಿ ರಾಯಲ್ ನ ಅಧ್ಯಕ್ಷರಾದ ರೊ. ತೇಜೇಶ್ವರ್ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ರೊ. ಮಂಗಳ ಚಂದ್ರಕಾಂತ್ ಪ್ರಾರ್ಥಿಸಿದರು. ರೊ. ಸುಧಾಕರ್ ಪೆರಂಪಳ್ಳಿ ವಂದಿಸಿದರು. ರತ್ನಾಕರ್ ಇಂದ್ರಾಳಿ ನಿರೂಪಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ರೊ. ಮಂಜುನಾಥ್ ಮಣಿಪಾಲ್, ರೊ. ಲಕ್ಷ್ಮಿಕಾಂತ್ ಬೆಸ್ಕೂರ್, ರೊ. ಲಕ್ಷ್ಮೀ ಕಿನ್ನಿಮುಲ್ಕಿ, ರೊ. ಮೊಹಮ್ಮದ್ ಮೌಲ, ರೊ. ಕೀರ್ತಿರಾಜ್, ರೊ. ಸುರೇಖ ಶೆಟ್ಟಿ, ರೊ. ಸುಬ್ಬಣ್ಣ ಮುಂತಾದವರು ಉಪಸ್ಥಿತರಿದ್ದರು.ರೋಟರಿ ಕ್ಲಬ್ ಉಡುಪಿ ರಾಯಲ್ ಗೆ ಜಿಲ್ಲಾ ಗವರ್ನರ್ ಅವರ ಅಧಿಕೃತ ಭೇಟಿ