ಫೆಬ್ರವರಿ 27 : ಸಹಕಾರ ಭಾರತಿ ಹೆಬ್ರಿ ತಾಲೂಕು ನೂತನ ಅಧ್ಯಕ್ಷರ ಪದಗ್ರಹಣ ಮತ್ತು ಮಾಹಿತಿ ಶಿಬಿರ

ಸಹಕಾರ ಭಾರತಿ ಹೆಬ್ರಿ ತಾಲೂಕು ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಮತ್ತು ಮಾಹಿತಿ ಶಿಬಿರ ಫೆಬ್ರವರಿ  27, ಮಂಗಳವಾರ 2024 ರಂದು ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ ಬೆಳಿಗ್ಗೆ ಗಂಟೆ 10: 00 ರಿಂದ ಮಧ್ಯಾಹ್ನ 1:30 ಗಂಟೆಯವರೆಗೆ ನಡೆಯಲಿರುವುದು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಕೆ.ಪಿ. ಸುಚರಿತ ಶೆಟ್ಟಿ ಕಡಂದಲೆಯವರು ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಲಿರುವರು.

ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಯುವ ಉದ್ಯಮಿ ಶ್ರೀ ಲಕ್ಷ್ಮೀನಾರಾಯಣ ನಾಯಕ್ ರವರು ಅಧ್ಯಕ್ಷತೆಯನ್ನು ವಹಿಸಲಿರುವರು.

ಮುಖ್ಯ ಅತಿಥಿಗಳಾಗಿ ಸಹಕಾರ ಭಾರತಿ ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ ಬೋಳ ಸದಾಶಿವ ಶೆಟ್ಟಿ, ರಾಷ್ಟ್ರೀಯ ಮತ್ಸ್ಯ ಪ್ರಕೋಷ್ದದ ಸಹ_ಸಂಚಾಲಕರು ಹಾಗೂ ಸಹಕಾರಿ ವಕೀಲರಾದ ಶ್ರೀ ಮಂಜುನಾಥ ಎಸ್ಕೆ, ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕರಾದ ಶ್ರೀ ಸಾಣೂರು ನರಸಿಂಹ ಕಾಮತ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

ಉದ್ಘಾಟನಾ ಸಮಾರಂಭದ ಬಳಿಕ ನಡೆಯಲಿರುವ ಮಾಹಿತಿ ಶಿಬಿರದಲ್ಲಿ “ಸಹಕಾರ ಭಾರತಿಯ ಹುಟ್ಟು ಮತ್ತು ಬೆಳವಣಿಗೆ”ಯ ಬಗ್ಗೆ ಸಹಕಾರ ಭಾರತಿ ಮೈಸೂರು ಪ್ರಾಂತ್ಯದ ಸಂಘಟನಾ ಪ್ರಮುಖರಾದ ಶ್ರೀ ಮೋಹನ್ ಕುಮಾರ್ ಕುಂಬಳೇಕರ್ ರವರು ಮಾಹಿತಿ ಮಾರ್ಗದರ್ಶನ ನೀಡಲಿರುವರು.

ಸಹಕಾರಿ ಕಾಯಿದೆ ಮತ್ತು ಸಹಕಾರಿ ಸಂಸ್ಥೆಗಳ ಆಡಳಿತ ನಿರ್ವಹಣೆಯ ಬಗ್ಗೆ ಸಹಕಾರಿ ಆಡಳಿತ ವಿದ್ಯಾಲಯ ಮೂಡಬಿದ್ರೆ ಇದರ ಪ್ರಾಂಶುಪಾಲರಾದ ಡಾ. ಎಂ ವಿಶ್ವೇಶ್ವರಯ್ಯ ನವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮಾತನಾಡಲಿರುವರು ಎಂದು ಸಹಕಾರ ಭಾರತಿ ಹೆಬ್ರಿ ತಾಲೂಕು ಘಟಕದ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

 
 
 
 
 
 
 
 
 
 
 

Leave a Reply