ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ.
ಇಂದಿರಾ ಶಿವರಾವ್ ಪಾಲಿಟೆಕ್ನಿಕ್ ಕಾಲೇಜಿನ ಅಧ್ಯಾಪಕರಾದ ವೇಣುಕೃಷ್ಣ ಅವರು ಮಾತನಾಡಿ ಸಂಗೊಳ್ಳಿ ರಾಯಣ್ಣನ ಬಳಗದವರ ಜನ ಉಪಯೋಗಿ ಕಾರ್ಯಗಳು ಶ್ಲಾಘನೀಯ, ಈಗಷ್ಟೇ ಚಿಗುರೊಡೆದ ಈ ತಂಡ ಹೆಮ್ಮರವಾಗಿ ಬೆಳೆದು ಸಮಾಜದಲ್ಲಿ ಉತ್ತಮ ಸಂಘಟನೆಯಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಕಾಪು ಪೊಲೀಸ್ ಠಾಣೆಯ ಅಧಿಕಾರಿಗಳಾದ ಶ್ರೀನಿವಾಸ್, ರಾಜೇಂದ್ರ , ಆನಂದ್, ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಉಪಾಧ್ಯಕ್ಷ ಈರಪ್ಪ ಗೌಂಡಿ, ಮಹಿಳಾ ಬಳಗದ ಸವಿತಾ ನೋಟಗಾರ್, ಬಸವರಾಜ್ ಐಹೊಳೆ, ಮಹೇಶ್ ಗುಂಡಿಬೈಲ್, ಶರಣಪ್ಪ , ಹನುಮಂತ, ಸುನಿಲ್ ಮೊದಲಾದವರು ಉಪಸ್ಥಿತರಿದ್ದರು.