ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಜಿಲ್ಲಾ ಘಟಕದ ಮಾದರಿ ಕಾರ್ಯಕ್ರಮ.

ದೇಶ ಸೇವೆ ಹಾಗು ಸಮಾಜ ಸೇವೆಗಾಗಿ ಹುಟ್ಟಿಕೊಂಡ ಸಂಸ್ಥೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ.

ಇದರ ಉಡುಪಿ ಜಿಲ್ಲಾಧ್ಯಕ್ಷರಾದ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಅವರ ಜನ್ಮದಿನದ ಪ್ರಯುಕ್ತ ಉಡುಪಿ ಜಿಲ್ಲಾ ಘಟಕ  ಒಂದು ವಾರ ಕಾಲ ಕೋರೋನಾ ದಿಂದ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಸಹಾಯ ಹಸ್ತವನ್ನು ಚಾಚುತ್ತಾ ತನ್ನ  ಅಳಿಲುಸೇವೆಯನ್ನು ಸಮಾಜಕ್ಕೆ ನೀಡಿದೆ.

ಉಡುಪಿ ಜಿಲ್ಲೆಯಾದ್ಯಂತ ಅನ್ನದಾನ, ತರಕಾರಿ ಕಿಟ್ ವಿತರಣೆ ಹಾಗೂ ಸಸಿ ನೆಡುವ ಕಾರ್ಯಕ್ರಮ ಗಳು ಮತ್ತು ಕೋವಿಡ್ 19 ಲಸಿಕೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಕಳೆದ ಒಂದು ವಾರದಿಂದ ನಡೆಯುತ್ತಿದೆ.

ಮಲ್ಪೆ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ, ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ಹಲವು ಸದಸ್ಯರಿಗೆ, ವಿಷ್ಣುಮೂರ್ತಿ ಫ್ರೆಂಡ್ಸ್ ದೊಡ್ಡಣಗುಡ್ಡೆ ಸದಸ್ಯರಿಗೆ, ಉಡುಪಿ ನಗರಸಭೆಯ ಕಾರ್ಯಕರ್ತರಿಗೆ, ಪರ್ಕಳ ವಾರ್ಡಿನ ಹಲವಾರು ಕಡೆಗಳಲ್ಲಿ, ಅನಾಥ ಆಶ್ರಮಗಳಿಗೆ ಹೀಗೆ ಹತ್ತು ಹಲವಾರು ಕಾರ್ಯಕ್ರಮಗಳ ಮಾಡುವ ಮೂಲಕ  ಉಡುಪಿ  ರಾಯಣ್ಣ ಸ್ವಾಮಿಯವರ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದೆ . 

ಈ ಸಂದರ್ಭದಲ್ಲಿ ಅಧ್ಯಕ್ಷ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ, ಗೌರವ ಸಲಹೆಗಾರ ಜನಾರ್ದನ್ ಕೊಡವೂರು, ಉಮಾ ಎಸ್ ಚಿಕ್ಕಮಠ, ಸವಿತಾ ನೋಟಗಾರ, ಈರಪ್ಪ ಗೌಂಡಿ, ಬಸವರಾಜ್ ಐಹೊಳೆ, ಮಹೇಶ್ ಗುಂಡಿಬೈಲ್, ರಮೇಶ್ ಎಂಜಿಎಂ, ಶರಣಪ್ಪ ಬಾರ್ಕೇರ್, ಅಯಾಜ್, ಹನುಮಂತರಾಯ ಪೂಜಾರಿ, ಶಿವರಾಜ್ ಗುಂಜಿ, ಗೋಪಾಲ , ಕಾಶಿನಾಥ್, ಮಂಜುನಾಥ್ ಬೋವಿ, ಹನುಮಂತ ಮುದ್ದಳ್ಳಿ, ಇತರರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply