ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ದ.ಕ ಜಿಲ್ಲಾಧಿಕಾರಿ ಹಾಗು ಪೊಲೀಸ್ ಆಯುಕ್ತರಿಗೆ ಮನವಿ

ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ ಜಿಲ್ಲಾ ವತಿಯಿಂದ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಮತ್ತು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ರವರಿಗೆ ಮನವಿ ಸಲ್ಲಿಸಲಾಯಿತು. 
ಜಿಲ್ಲೆಯ ಎಲ್ಲಾ ಸರಕಾರಿ ಶಾಲಾ, ಕಾಲೇಜು ಹಾಗೂ ಸರಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕುವಂತೆ ಮತ್ತು ಆಗಸ್ಟ್ 15, ಜನವರಿ 26 ರಂದು ರಾಯಣ್ಣನಿಗೆ ಗೌರವ ಸಲ್ಲಿಸುವ ಕುರಿತು ಮನವರಿಕೆ ಮಾಡಲಾಯಿತು.  
 
ಈ ಸಂದರ್ಭದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷ ಮಂಜುನಾಥ್ ನೋಟಗಾರ್, ಉಡುಪಿ ಜಿಲ್ಲಾ ಮಹಿಳಾ ಬಳಗದ ಅಧ್ಯಕ್ಷೆ  ಸವಿತಾ ನೋಟಗಾರ್, ಕಾಶಿನಾಥ್ ಸುಬೇದಾರ್, ಬಸನಗೌಡ ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply