ಅನಂತಚೇತನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ಉಡುಪಿ ಅನಂತಚೇತನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಈ ಶೈಕ್ಷಣಿಕ ಸಾಲಿನಲ್ಲಿ ಆಯ್ದ ಶಾಲಾ ಕಾಲೇಜಿನ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಕುಕ್ಕಿಕಟ್ಟೆ ಖಾಸಗಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಸಮಾರಂಭವು ಕಡಿಯಾಳಿ ಯು ಕಮಲಾ ಬಾಯಿ ಪ್ರೌಢಶಾಲೆಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಟ್ರಸ್ಟ್ ಆಧ್ಯಕ್ಷ ಎಂ ರಾಮಕೃಷ್ಣ ಮಯ್ಯ ಮಾತನಾಡಿ ಕಳೆದ 21 ವರ್ಷಗಳಲ್ಲಿ ಸುಮಾರು 55 ಲಕ್ಷಕ್ಕಿಂತಲೂ ಹೆಚ್ಚಿನ ಮೊತ್ತದ ಧನ ಸಹಾಯವನ್ನು ವಿದ್ಯಾರ್ಥಿವೇತನ,ಸಮವಸ್ತ್ರ, ಸ್ವ ಉದ್ಯೋಗಕ್ಕಾಗಿ ಆರ್ಥಿಕ ನೆರವನ್ನು ವಿತರಿಸಲಾಗಿದ್ದು,ಈ ಸಾಲಿನಲ್ಲಿ 1.5 ಲಕ್ಷ ಮೊತ್ತದ ವಿದ್ಯಾರ್ಥಿವೇತನವನ್ನು ಜಿಲ್ಲೆಯ ಆಯ್ದ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಕಮಲಾ ಬಾಯಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಗಣೇಶ ಮೂರ್ತಿ ಹೆಬ್ಬಾರ್,ಹಿರಿಯಡ್ಕ ಪ ಪೂ ಕಾಲೇಜಿನ ಉಪನ್ಯಾಸಕಿ ನಳಿನಾದೇವಿ ಎಂ ಆರ್,ಶಾರದಾ ಮಯ್ಯ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಶ್ವನಾಥ ಬಾಯರಿ ಸ್ವಾಗತಿಸಿದರು. ಟ್ರಸ್ಟ್ ನ ಪದಾಧಿಕಾರಿಗಳಾದ ಡಾ ಗೀತಾ ಮಯ್ಯ ಫಲಾನುಭವಿಗಳ ಪಟ್ಟಿ ವಾಚಿಸಿದರು. ವೆಂಕಟ್ರಾಜ್ ಭಟ್ ವಂದಿಸಿದರು.ಶಿಕ್ಷಕ ಸುದರ್ಶನ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply