​ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಸ್ಥಳೀಯ ಸಂಸ್ಥೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸರ್ವಧರ್ಮ ಪ್ರಾರ್ಥನೆ

​ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಸ್ಥಳೀಯ ಸಂಸ್ಥೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿ ಸರ್ವಧರ್ಮ ಪ್ರಾರ್ಥನೆಯನ್ನು ಮಾಡಿ ಉಡುಪಿಯ ಅಜ್ಜರ ಕಾಡಿನಿಂದ ಸರ್ವಿಸ್ ಬಸ್ಟ್ಯಾಂಡಿನ ವರೆಗೆ ಶಾಂತಿ ಮೆರವಣಿಗೆ ನಡೆಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸ್ಕೌಟ್ ಆಯುಕ್ತರಾದ ಡಾಕ್ಟರ್ ವಿಜಯೇಂದ್ರ ವಸಂತ ರಾವ್ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿರುವ ಪಿ.ಎಂ ವೇಣುಗೋಪಾಲ್ ಹೆಬ್ಬಾರ್ ಹಾಗೂ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾಗಿರುವ ಶ್ರೀ ಶೇಖರ್ ಪೂಜಾರಿ  ಹಾಗೂ ಕಾರ್ಯಕ್ರಮದಲ್ಲಿ ಉಡುಪಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಆಗಿರುವಂತಹ ಶ್ರೀಮತಿ ಮಂಜುಳ ಉಪಸ್ಥಿತರಿದ್ದರು. 
ಜಿಲ್ಲಾ ಸಂಘಟಕರಾದ ಶ್ರೀಮತಿ ಸುಮನ್ ಎಸ್ ಮತ್ತು ಶ್ರೀ ನಿತಿನ್ ಅಮೀನ್  ಕಾರ್ಯಕ್ರಮ ಸಂಘಟಿಸಿದರು. ಉಡುಪಿಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಸಹ ಸ್ಥಾಪಕರ ದಿನಾಚರಣೆ ಹಾಗೂ ಚಿಂತನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಶಿಕ್ಷಕರು ಮಕ್ಕಳೊಂದಿಗೆ ನಡೆಸಿಕೊಟ್ಟರು
ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಹಾಗೂ  ಮಹತ್ವಪೂರ್ಣವಾಗಿ ಕಾರ್ಯಕ್ರಮವನ್ನು ತಮ್ಮ ತಮ್ಮ ಶಾಲೆಗಳಲ್ಲಿ ಕಾಲೇಜುಗಳಲ್ಲಿ ಆಯೋಜಿಸಿರುವ ಎಲ್ಲರಿಗೂ ಜಿಲ್ಲಾ ಮುಖ್ಯ ಆಯುಕ್ತರು ಹಾಗೂ ರಾಜ್ಯ ಮುಖ್ಯ ಆಯುಕ್ತರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.  ​

​​

 
 
 
 
 
 
 
 
 
 
 

Leave a Reply