ಶ್ರೀ ಶಾಂತಿಮತೀ ಪ್ರತಿಷ್ಠಾನ ದ ಸಾಧಕರೆಡೆ ನಮ್ಮ ನಡೆ ಕಾರ್ಯಕ್ರಮ

ಶ್ರೀ ಶಾಂತಿಮತೀ ಪ್ರತಿಷ್ಠಾನ ದ ಸಾಧಕರೆಡೆ ನಮ್ಮ ನಡೆ ಕಾರ್ಯಕ್ರಮ ದ ಅಂಗವಾಗಿ ಇಂದು ಸಂಜೆ ಸಾಲಿಗ್ರಾಮ ಪಾರಂಪಳ್ಳಿ ಯ ಶ್ರೀಯುತ ಗಣೇಶ ಅಡಿಗಳನ್ನು ಗೌರವಿಸಲಾಯಿತು, ಭಾರತೀಯ ಸೇನೆಯ ಮೂರೂ ವಿಭಾಗಗಳಲ್ಲಿ 31 ವರ್ಷಗಳ ಕಾಲ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರನ್ನು ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಂತಿಮತೀ ಪ್ರತಿಷ್ಠಾನ ದ ಅಧ್ಯಕ್ಷರಾದ ಚಂದ್ರಶೇಖರ ಅಡಿಗಳು, ಶ್ರೀಯುತರ ಸಹೋದರ ಜನಾರ್ದನ ಅಡಿಗಳು, ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಸಂಸ್ಕೃತ ಅಧ್ಯಾಪಕರಾದ ನಾರಾಯಣ ಮೂರ್ತಿ ಉಡುಪರು, ಮಾರಾಳಿ ಸುಬ್ರಹ್ಮಣ್ಯ ಮಿತ್ಯಂತಾಯರು ಭಾಗವಹಿಸಿದ್ದರು, ಗೌರವ ಸ್ವೀಕರಿಸಿ ಮಾತನಾಡಿದ ಶ್ರೀಯುತರು ಸೇನೆಯಲ್ಲಿ ಪಡೆದ ಅನುಭವವನ್ನು ಹಂಚಿಕೊಂಡರು, ಅಗ್ನಿಪಥ ಯೋಜನೆಯ ಅಡಿಯಲ್ಲಿ ಸೇನೆ ಸೇರಲು ಬಯಸುವವರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು, ಉಮೇಶ್ ಬಾಯರಿ ಸ್ವಾಗತಿಸಿ ವಿಜಯ ಮಂಜರ್ ಪ್ರಾಸ್ತಾವಿಕ ಮಾತನಾಡಿದರು, ಪ್ರಸನ್ನ ಭಟ್ ಧನ್ಯವಾದ ಸಮರ್ಪಣೆಗೈದು ರಾಮಚಂದ್ರ ಉಡುಪ ಬಾರ್ಕೂರು ಕಾರ್ಯಕ್ರಮ ನಿರೂಪಿಸಿದರು ಲಘು ಉಪಹಾರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು ಶಾಂತಿಮತೀ ಪ್ರತಿಷ್ಠಾನ ದ ಸದಸ್ಯರು ಹಾಗೂ ಗಣೇಶ ಅಡಿಗಳ ಹಿತೈಷಿಗಳು ಭಾಗವಹಿಸಿದ್ದರು.

 
 
 
 
 
 
 
 
 
 
 

Leave a Reply