ಶಾಂತಿನಿಕೇತನ ಯುವ ವೃಂದ​​ಕ್ಕೆ ರಾಜ್ಯ ಮಟ್ಟದ ಯುವ ಮಂಡಳ ಪ್ರಶಸ್ತಿ

ಉಡುಪಿ, ಫೆಬ್ರವರಿ 22 (ಕವಾ): ಕೇಂದ್ರ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಸಂಘಟನೆ, ನೀಡುವ ರಾಜ್ಯ ಮಟ್ಟದ ಅತ್ಯುತ್ತಮ ಯುವ ಮಂಡಳ 2020-21 ನೇ ಸಾಲಿನ ಪ್ರಶಸ್ತಿಗೆ ಹೆಬ್ರಿ ತಾಲೂಕು ಕುಚ್ಚೂರು ಕುಡಿಬೈಲು ಶಾಂತಿನಿಕೇತನ ಯುವ ವೃಂದ ಇವರು ಆಯ್ಕೆಯಾಗಿದ್ದು, ಈ ಪ್ರಶಸ್ತಿಯು 75 ಸಾವಿರ ರೂ. ನಗದು ಹಾಗೂ ಪ್ರಶಂಸ ಪತ್ರವನ್ನು ಒಳಗೊಂಡಿರುತ್ತದೆ.

ಕಳೆದ 9 ವರ್ಷದಿಂದ ಸಮಾಜ ಸೇವೆ ಹಾಗೂ ಸಾರ್ವಜನಿಕ ಒಳಿತಿಗಾಗಿ ಶಾಂತಿನಿಕೇತನ ಯುವ ವೃಂದವು (ರಿ) ಸಮಾಜ ಸೇವಾ
ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದು ಮಾದರಿಯಾಗಿದ್ದು, ಈ ಸಂಘಕ್ಕೆ ರಾಜ್ಯ ಪ್ರಶಸ್ತಿ ಬಂದಿರುವುದು ಜಿಲ್ಲೆಗೆ ಗೌರವ ಎಂದು
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply