ಡಾ.ಶೇಖರ್ ಅಜೆಕಾರ್ ಅವರ ಕುಟುಂಬಕ್ಕೆ ಸಹಾಯಧನ ವಿತರಣೆ

ಶಿರ್ವಃ ಕಟಪಾಡಿಯ ಸೃಷ್ಠಿ ಫೌಂಡೇಶನ್ (ರಿ.) ಮತ್ತು ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಸಂಸ್ಥೆಯ ವತಿಯಿಂದ ಅಕಾಲಿಕವಾಗಿ ನಿಧನರಾದ ಪತ್ರಕರ್ತ ಡಾ.ಶೇಖರ್ ಅಜೆಕಾರ್ ಅವರ ಕುಟುಂಬಕ್ಕೆ ರೂ.20 ಸಾವಿರ ಸಹಾಯಧನವನ್ನು ಉಡುಪಿ ಜಗನ್ನಾಥ ಸಭಾ ಭವನದಲ್ಲಿ ವಿತರಿಸಲಾಯಿತು.

ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಅವರು ತಾರಾ ಶೇಖರ್ ಅವರಿಗೆ ಠೇವಣಿ ಸರ್ಟಿಫಿಕೇಟ್ ಹಸ್ತಾಂತರಿಸಿದರು.

ಸೃಷ್ಠಿ ಫೌಂಡೇಶನ್ ಅಧ್ಯಕ್ಷ ಪ್ರಕಾಶ ಸುವರ್ಣ ಕಟಪಾಡಿ, ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಸಂಸ್ಥೆಯ ಅಧ್ಯಕ್ಷ ನಾಗೇಶ್ ಕಾಮತ್ ಕಟಪಾಡಿ, ನಿವೃತ್ತ ಶಿಕ್ಷಕ ಬಿ.ಪುಂಡಲೀಕ ಮರಾಠೆ ಶಿರ್ವ, ಚಲನಚಿತ್ರ ಕಲಾವಿದರಾದ ಶೋಭರಾಜ್ ಪಾವೂರು, ರಾಹುಲ್ ಅಮೀನ್, ವಿನೀತ್ ಕುಮಾರ್, ಶೈಲಶ್ರೀ ಮುಲ್ಕಿ, ಸಿನೆಮಾ ನಿರ್ಮಾಪಕರಾದ ದತ್ತಾತ್ರೇಯ ಪಾಟ್ಕರ್, ಚಂದ್ರಕಲಾ ರಾವ್, ಕ್ಲಿಂಗ್ ಜಾನ್ಸನ್ ,ಸಂದೀಪ್ ಕಾಮತ್ , ಭುವನೇಶ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply