ಕೆಯುಡಬ್ಲ್ಯೂಜೆ ಅಧ್ಯಕ್ಷರಾಗಿ ಮತ್ತೊಂದು ಅವಧಿಗೆ ಶಿವಾನಂದ ತಗಡೂರು ಅವಿರೋಧ ಆಯ್ಕೆ

ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಅಧ್ಯಕ್ಷರಾಗಿ ಮತ್ತೊಂದು ಅವಧಿಗೆ ಶಿವಾನಂದ ತಗಡೂರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ತಗಡೂರು ಅವರು ಒಬ್ಬರು ಕಣದಲ್ಲಿ ಉಳಿದಿದ್ದು ಅವಿರೋಧ ಆಯ್ಕೆಯಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

2018-2022 ಅವಧಿಯಲ್ಲಿ ಕೆಯುಡಬ್ಲ್ಯೂಜೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಶಿವಾನಂದ್ ಅವರು 2022-2025 ಅವಧಿಗೆ ಮತ್ತೆ ಅವಿರೋಧವಾಗಿ ಆಯ್ಕೆಯಾದಂತಾಗಿದೆ.

1990 ರಲ್ಲಿ ಜನಮಿತ್ರ ಪತ್ರಿಕೆಯ ಮೂಲಕ ಪತ್ರಿಕೋದ್ಯಮ ಪ್ರವೇಶಿಸಿದ ಅವರು, ಈ ವಾರ, ಜನವಾಹಿನಿ, ವಿಜಯ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದು ಸದ್ಯ ವಿಜಯವಾಣಿ ಪತ್ರಿಕೆಯಲ್ಲಿ ಹಿರಿಯ ವಿಶೇಷ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ.

ಹಾಸನ ಜಿಲ್ಲಾ ಕಾರಣ ಕಾರ್ಯ ನಿರತ ಪತ್ರಕರ್ತರ ಸಂಘದ ಸಾಮಾನ್ಯ ಸದಸ್ಯರಾಗಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಜಿಲ್ಲಾ ಸಂಘದ ಅಧ್ಯಕ್ಷರಾಗಿ, 2011 ರಿಂದ 2018 ತನಕ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಕೋವಿಡ್ ಸಂದರ್ಭದಲ್ಲಿ ಅವಿರತವಾಗಿ ಹೋರಾಟ ಮಾಡಿ ಮೃತಪಟ್ಟ ಪತ್ರಕರ್ತರಲ್ಲಿ, ತೀವ್ರ ಸಂಕಷ್ಟದಲ್ಲಿದ್ದ ಐವತ್ತಕ್ಕೂ ಹೆಚ್ಚು ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಸರ್ಕಾರದಿಂದ ಕೊಡಿಸಿದ್ದು ತಗಡೂರು ಅವರ ಸಾಂಘಿಕ ಶಕ್ತಿಗೆ ಹಿಡಿದ ಕನ್ನಡಿ.

ಶಿವಾನಂದ ತಗಡೂರು ಅವರಿಗೆ ನಾಡಿನ ಪತ್ರಕರ್ತ ಬಳಗ, ಸಂಘಟನೆಗಳು ಅಭಿನಂದಿಸಿವೆ.

 
 
 
 
 
 
 
 
 
 
 

Leave a Reply