ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಸಿಯೇಷನ್ ಬ್ರಹ್ಮಾವರ ವಲಯದ ಸದಸ್ಯ ಕಿರಣ್ ಕುಮಾರ್ ಅವರು ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದು, ಎಸ್ ಕೆಪಿಎ ವತಿಯಿಂದ ಅವರ ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿ, ಆರ್ಥಿಕ ಧನ ಸಹಾಯವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಪ್ರಕಾಶ್ ಜತ್ತನ್ ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿ ಪ್ರತಿಷ್ ಕುಮಾರ್, ಕೋಶಾಧಿಕಾರಿ ಹರೀಶ್ ತೆಕ್ಕಟ್ಟೆ ಉಪಸ್ಥಿತರಿದ್ದರು.