ಎಸ್. ಕೆ. ಪಿ.ಎ ಉಡುಪಿ ವಲಯ -ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ

ಮಕ್ಕಳ ದಿನಾಚರಣೆಯ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಜಗನ್ನಾಥ ಸಬಾಭವನದಲ್ಲಿ ಸುಧೀರ್ ಎಂ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸುನೀಲ್ ಸಾಲ್ಯಾನ್ ಕಡೆಕಾರು,ನಾಗರಾಜ ರಾವ್ ವರ್ಕಾಡಿ,ಜಿಲ್ಲಾ ಉಪಾಧ್ಯಕ್ಷ ಜಯಕರ ಸುವರ್ಣ ಅತಿಥಿಗಳಾಗಿ ಭಾಗವಹಿಸಿದರು. ವೇದಿಕೆಯಲ್ಲಿ ಪ್ರ.ಕಾರ್ಯದರ್ಶಿ ದಿವಾಕರ ಹಿರಿಯಡಕ, ಕೋಶಾಧಿಕಾರಿ ರಮೇಶ್ ಭಟ್ ಎಲ್ಲೂರು,ಛಾಯಾಕಾರ್ಯದರ್ಶಿ ಅಶೋಕ್ ದೇವಾಡಿಗ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು. ರಮೇಶ್ ಭಟ್ ಎಲ್ಲೂರು ಪ್ರಾರ್ಥನೆಯನ್ನು ನೆರವೇರಿಸಿದರು.ಸುಧೀರ್ ಎಂ ಶೆಟ್ಟಿ ಸ್ವಾಗತಿಸಿದರು. ದಿವಾಕರ ಹಿರಿಯಡಕ ಧನ್ಯವಾದವಿತ್ತರು.ರಾಘವೇಂದ್ರ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply