ಆತ್ಮವಿಶ್ವಾಸ ಹೆಚ್ಚಿಸಲು ತರಬೇತಿ ಶಿಬಿರಗಳು ಅನಿವಾರ್ಯ ~ವಿಜಯ ಶೆಟ್ಟಿ

ವ್ಯಕ್ತಿ ಅಥವಾ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಹೆಚ್ಚಿಸಲು ತರಬೇತಿ ಶಿಬಿರಗಳು ಅನಿವಾರ್ಯ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಪ್ರತಿ ವರ್ಷ ಆಯೋಜಿಸುವ ಪ್ರೇರಣಾ ಶಿಬಿರದಿಂದ ಆತ್ಮಸ್ಟೈರ್ಯ ಬೆಳೆದು ಉತ್ತಮ ಅಂಕ ಗಳಿಸಲು ಸಹಕಾರಿ ಎಂದು ಶ್ರೀ ವಿಜಯ ಶೆಟ್ಟಿ ಕೆಳಗಿನ ಮನೆ ಸಾಣೂರು ಅಭಿಪ್ರಾಯಪಟ್ಟರು ಅವರು ನೆಹರು ಯುವ ಕೇಂದ್ರ ಸಂಘಟನೆ ಇವರ ಮಾರ್ಗದರ್ಶನದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವರು ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಇಲ್ಲಿನ ಹೈಸ್ಕೂಲ್ ವಿಭಾಗದ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ಪರೀಕ್ಷಾ ಪೂರ್ವ ಸಿದ್ಧತೆ ಮಾಹಿತಿ ಕಾರ್ಯಾಗಾರ ಪ್ರೇರಣಾ ಶಿಬಿರ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕರಾದ ಶ್ರೀ ಗಣೇಶ್ ಮೊಗವೀರ ಪ್ರಾಸ್ತಾವಿಕವಾಗಿ ಮಾತನಾಡಿದರು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಶಿಬಿರದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಪ್ರಸಾದ್ ಪೂಜಾರಿ ಸ್ವಾಗತಿಸಿ ಕಾರ್ಯದರ್ಶಿ ಶ್ರೀ ಮೋಹನ್ ಶೆಟ್ಟಿ ನಿರೂಪಿಸಿ ಶಿಕ್ಷಕಿ ಶ್ರೀ ವಿಮಲಾ ವಂದಿಸಿದರು ಕಾರ್ಯಕ್ರಮದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಶ್ರೀ ಜನಾರ್ಧನ್ ಆಚಾರ್ಯ ಯುವಕ ಮಂಡಲದ ಕೋಶಾಧಿಕಾರಿ ಶ್ರೀ ರಾಜೇಶ್, ಉಪಾಧ್ಯಕ್ಷ ಶ್ರೀ ಪ್ರಸಾದ್ ಶೆಟ್ಟಿ ಸಮಿತಿ ಸದಸ್ಯರಾದ ಶ್ರೀ ಶುಭಕರ್ ಶೆಟ್ಟಿ, ಶ್ರೀ ಸೀತಾರಾಮ್ ವಿದ್ಯಾರ್ಥಿಗಳ ಪೋಷಕರು ಸಹ ಶಿಕ್ಷಕರು ಉಪಸ್ಥಿತರಿದ್ದರು ಸರಕಾರಿ ಪದವಿ ಪೂರ್ವ ಕಾಲೇಜು ವೇಣೂರು ಇಲ್ಲಿನ ಕನ್ನಡ ಅಧ್ಯಾಪಕರಾದ ಶ್ರೀ ರವೀಂದ್ರ.ಕೆ ಶಿಬಿರ ನಡೆಸಿ ಮಾರ್ಗದರ್ಶನ ನೀಡಿದರು

 
 
 
 
 
 
 
 
 
 
 

Leave a Reply